ನವದೆಹಲಿ: ಬೆಂಕಿ ಆಕಸ್ಮಿಕದಿಂದಾಗಿ ಸುಮಾರು 200 ಗುಡಿಸಲುಗಳು ಸುಟ್ಟು ಭಸ್ಮವಾಗಿರುವ ಘಟನೆಯು ದೆಹಲಿಯ ತುಘಲಕಾಬಾದ್ ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ದಳವು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದೆ. ಘಟನೆಯಲ್ಲಿ ಯಾರೊಬ್ಬರೂ ಗಾಯಗೊಂಡಿಲ್ಲವೆಂದು ವರದಿಯಾಗಿದೆ.
ಮಧ್ಯರಾತ್ರಿ 1.31ರ ಸುಮಾರಿಗೆ ಬೆಂಕಿ ಆಕಸ್ಮಿಕದ ಬಗ್ಗೆ ಕರೆ ಬಂದಿದೆ. ಕೂಡಲೇ ವಾಹನಗಳನ್ನು ಕಳುಹಿಸಿ ಬೆಂಕಿ ನಂದಿಸಲು ಪ್ರಯತ್ನಿಸಲಾಗಿದೆ. 3 ಗಂಟೆಗೆ ಸಂಪೂರ್ಣವಾಗಿ ಬೆಂಕಿ ನಂದಿಸಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದರು.