ಸೋನಾಮುರ ; ತ್ರಿಪುರಾ ರಾಜ್ಯದ ಸೋನಾಮುರ ಶಾಖೆಯಲ್ಲಿರುವ ತನ್ನ ಸ್ಟೇಟ್ ಬ್ಯಾಂಕ್ ಖಾತೆಗೆ ನಕಲಿ ಹಣ ಜಮಾ ಮಾಡಲು ಯತ್ನಿಸಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.ತ್ರಿಪುರಾದ ಸೆಪಾಹಿಜಲಾ ಜಿಲ್ಲೆಯ ಸೋನಮುರಾ ಪ್ರದೇಶದ ಆಶಾ ಖತುನ್ ಬಂಧಿತ ಆರೋಪಿ. ಈಕೆ ಸೋನಮುರದ ರವೀಂದ್ರ ನಗರದಲ್ಲಿರುವ ತನ್ನ ಎಸ್ಬಿಐ ಬ್ಯಾಂಕ್ ಖಾತೆಗೆ ಶುಕ್ರವಾರ 2 ಲಕ್ಷದ 45 ಸಾವಿರ ರೂ. ಜಮಾ ಮಾಡಲು ಬಂದಿದ್ದಳು.
ಆ ಹಣವನ್ನು ಬ್ಯಾಂಕ್ ಕ್ಯಾಷಿಯರ್ ಪರಿಶೀಲಿಸಿದಾಗ 500 ಮತ್ತು 100 ರೂ. ಮುಖಬೆಲೆಯ ನಕಲಿ ನಕಲಿ ನೋಟುಗಳು ಪತ್ತೆಯಾಗಿವೆ. ಕ್ಯಾಷಿಯರ್ ಕೂಡಲೇ ಈ ಮಾಹಿತಿಯನ್ನು ಸೇವಾ ವ್ಯವಸ್ಥಾಪಕ ಅಮಿತಾಭ ರಾಯ್ಗೆ ತಿಳಿಸಿದರು. ನಂತರ ಅವರು ಶಾಖಾ ವ್ಯವಸ್ಥಾಪಕ ಕುಂದನ್ ಸುಭಾಗೆ ಮಾಹಿತಿ ನೀಡಿದರು.ಪೊಲೀಸರಿಗೆ ಈ ಬಗ್ಗೆ ಲಿಖಿತ ದೂರು ನೀಡಲಾಗಿದ್ದು, ಪೊಲೀಸರು ಆಶಾ ಖತುನ್ಅನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ವೇಳೆ ಮಹಿಳೆ ನೆರೆ ಗ್ರಾಮವಾದ ಶ್ರೀಮಂತಾಪುರದ ಜಾಯ್ನಾಲ್ ಮಿಯಾ ಅವರಿಂದ ಹಣ ಪಡೆದಿರುವುದಾಗಿ ತಿಳಿಸಿದ್ದು, ಕೋರ್ಟ್ ಏಪ್ರಿಲ್ 16ಕ್ಕೆ ವಿಚಾರಣೆ ಮುಂದೂಡಿದೆ. ಪೊಲೀಸರು ಈ ಕೃತ್ಯದಲ್ಲಿ ಭಾಗಿಯಾದ ಮತ್ತಷ್ಟು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…