Categories: ವಿದೇಶ

ಭಾರತಕ್ಕೆ ನಿಷ್ಠಾವಂತ ಪಾಲುದಾರನಾಗಿ ಅಮೆರಿಕಾ ಮಾತ್ರ ಉಳಿಯಲಿದೆ ರಷ್ಯಾ ಅಲ್ಲ: ಅಮೆರಿಕಾ

ರಷ್ಯಾ-ಉಕ್ರೇನ್ ಯುದ್ಧ ಮುಗಿದ ನಂತರ, ಭಾರತಕ್ಕೆ ನಿಷ್ಠಾವಂತ ಪಾಲುದಾರನಾಗಿ ಅಮೆರಿಕಾ ಮಾತ್ರ ಉಳಿಯಲಿದೆ ರಷ್ಯಾ ಅಲ್ಲ ಎಂದು ಅಮೆರಿಕಾ ಹೇಳಿದೆ. ಭಾರತದಲ್ಲಿ ರಕ್ಷಣೆ ಮತ್ತು ರಾಷ್ಟ್ರೀಯ ಭದ್ರತೆಯನ್ನು ಹೆಚ್ಚಿಸಲು ಎಷ್ಟು ದೂರ ಬೇಕಾದರೂ ಪ್ರಯಾಣಿಸಲು ಅಮೆರಿಕಾ ಸಿದ್ಧವಾಗಿದೆ ಎಂಬುದನ್ನು ಬಿಡೆನ್ ಆಡಳಿತ ಮೂಲಗಳು ಬಹಿರಂಗಪಡಿಸಿವೆ.

ಉಕ್ರೇನ್‌ನೊಂದಿಗಿನ ಯುದ್ಧದಲ್ಲಿ ರಷ್ಯಾ ತನ್ನ ಶಸ್ತ್ರಾಸ್ತ್ರಗಳನ್ನು ದೊಡ್ಡ ಪ್ರಮಾಣದಲ್ಲಿ ಬಳಸಿದೆ, ಹೀಗಿರುವಾಗಿ ರಷ್ಯಾ ಭಾರತಕ್ಕೆ ನಿಷ್ಠಾವಂತ ಪಾಲುದಾರನಾಗಿ ಉಳಿಯಲು ಸಾಧ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಭಾರತಕ್ಕೆ, ರಷ್ಯಾ ರಕ್ಷಣಾ ಪರಿಕರಗಳನ್ನು ಒದಗಿಸಲು ಆಗುವುದಿಲ್ಲ. ಹಾಗಾಗಿಯೇ ಭಾರತದೊಂದಿಗೆ ನಮ್ಮ ಪಾಲುದಾರಿಕೆ ಬಲವಾಗಿ ಮುಂದುವರಿಯಲಿದೆ ಎಂಬ ವಿಶ್ವಾಸ ನಮಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ, ಆಂಥೋನಿ ಬ್ಲಿಂಕೆನ್ ಅವರ ಮುಖ್ಯ ಸಲಹೆಗಾರ ಡೆರೆಕ್ ಚೋಲೆಟ್ ಹೇಳಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಡೆರೆಕ್, ತನ್ನ ರಕ್ಷಣಾ ಸಾಮರ್ಥ್ಯಗಳನ್ನು ಹೆಚ್ಚಿಸಲು ನೋಡುತ್ತಿರುವ ಭಾರತವು ರಕ್ಷಣಾ ಸಾಧನಗಳ ಪೂರೈಕೆಯ ಮೇಲೆ ಹೆಚ್ಚು ಅವಲಂಬಿತವಾಗಿದೆ. ಈ ಕ್ಷೇತ್ರದಲ್ಲಿ ಭಾರತದೊಂದಿಗೆ ಕೆಲಸ ಮಾಡಲು ಯುನೈಟೆಡ್ ಸ್ಟೇಟ್ಸ್ ಬಹಳ ದೃಢವಾಗಿ ನಿರ್ಧರಿಸಿದೆ. ರಕ್ಷಣಾ ವಿಷಯಗಳಲ್ಲಿ ಭಾರತ-ಯುಎಸ್ ಸಂಬಂಧಗಳು ಹಿಂದೆಂದಿಗಿಂತಲೂ ಬಲವಾಗಿವೆ ಎಂದರು.

ಮುಂಬರುವ ದಿನಗಳಲ್ಲಿ ರಷ್ಯಾದೊಂದಿಗಿನ ವ್ಯಾಪಾರ ಸಂಬಂಧಗಳು ಹೆಚ್ಚು ಕಷ್ಟಕರವಾಗಲಿವೆ ಮತ್ತು ಕಳೆದ 12 ವಾರಗಳಲ್ಲಿ ಆ ದೇಶದ ಮೇಲೆ ನಿರ್ಬಂಧಗಳನ್ನು ವಿಧಿಸಿದ ಹಿನ್ನೆಲೆಯಲ್ಲಿ ಇನ್ನು ಮುಂದೆ ಕೆಲವು ಪ್ರಮುಖ ಉತ್ಪನ್ನಗಳನ್ನು ರಫ್ತು ಮಾಡಲು ರಷ್ಯಾದಿಂದ ಸಾಧ್ಯವಾಗುವುದಿಲ್ಲ ಎಂದು ಡೆರೆಕ್ ಹೇಳಿದ್ದಾರೆ.

ರಕ್ಷಣಾ ಉಪಕರಣಗಳು ಸೇರಿದಂತೆ, ನಿರ್ದಿಷ್ಟ ಉತ್ಪನ್ನಗಳನ್ನು ತಯಾರಿಸಲು ಪ್ರಮುಖ ತಂತ್ರಜ್ಞಾನಗಳನ್ನು ಆಮದು ಮಾಡಿಕೊಳ್ಳಲು ರಷ್ಯಾ ಅಸಮರ್ಥವಾಗಿದೆ. ರಕ್ಷಣಾ ಸಾಧನಗಳ ಉತ್ಪಾದನೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಿರುವಾಗ ಭಾರತಕ್ಕೆ ರಕ್ಷಣಾ ಉಪಕರಣಗಳನ್ನು ಪೂರೈಸಲು ಸಾಧ್ಯವಿಲ್ಲ ಎಂಬ ಮಾತನ್ನು ಡೆರೆಕ್ ಹೇಳಿದರು. ಯುಎಸ್-ಭಾರತದ ಸಂಬಂಧವು ಆಳವಾಗಿ ಮತ್ತು ದೃಢವಾಗಿದೆ ಎಂದಿದ್ದಾರೆ.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

4 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago