News Karnataka Kannada
Wednesday, May 01 2024
ವಿದೇಶ

ಭಾರತದಲ್ಲಿ ಸದೃಢ ಮತ್ತು ಬದ್ಧ ನಾಯಕತ್ವವಿದೆ: ವಿತ್ತ ಸಚಿವೆ

Nirmala Seetaraman Delhi 28 6 21
Photo Credit :

ವಾಷಿಂಗ್​ಟನ್: ಭಾರತದಲ್ಲಿ ಹೂಡಿಕೆದಾರರು ಹಾಗೂ ಕೈಗಾರಿಕೋದ್ಯಮಿಗಳಿಗೆ ಸಾಕಷ್ಟು ಅವಕಾಶಗಳಿವೆ. ಜಾಗತಿಕ ಪೂರೈಕೆ ವ್ಯವಸ್ಥೆಯಲ್ಲಿ ಆಗಿರುವ ಹೊಸ ಬೆಳವಣಿಗೆಗಳು ಹಾಗೂ ಭಾರತಕ್ಕೆ ಇರುವ ಸ್ಪಷ್ಟ ಮನಃಸ್ಥಿತಿಯ ಮತ್ತು ಬದ್ಧ ನಾಯಕತ್ವವು ದೇಶದಲ್ಲಿ ಹೂಡಿಕೆಗೆ ಪೂರಕ ವಾತಾವರಣ ರೂಪಿಸಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ವಾಷಿಂಗ್​ಟನ್​ನಿಂದ ಶುಕ್ರವಾರ ತಡರಾತ್ರಿ ನ್ಯೂಯಾರ್ಕ್​ಗೆ ಬಂದ ನಿರ್ಮಲಾ ಸೀತಾರಾಮನ್ ವಿಶ್ವಬ್ಯಾಂಕ್ ಮತ್ತು ಅಂತರರಾಷ್ಟ್ರೀಯ ಹಣಕಾಸು ನಿಧಿ (International Monetary Fund – IMF) ಸಂಸ್ಥೆಗಳ ವಾರ್ಷಿಕ ಸಭೆಗಳಲ್ಲಿ ಪಾಲ್ಗೊಂಡಿದ್ದರು.

ಜಾಗತಿಕ ಪೂರೈಕೆ ಸರಪಣಿಯು ಈಗ ಬದಲಾಗಿದೆ. ಭಾರತದಲ್ಲಿ ಸದೃಢ ಮತ್ತು ಬದ್ಧ ನಾಯಕತ್ವವಿದೆ. ಎಲ್ಲ ಹೂಡಿಕೆದಾರರು ಮತ್ತು ಕೈಗಾರಿಕೋದ್ಯಮಿಗಳಿಗೆ ಭಾರತದಲ್ಲಿ ಅವಕಾಶಗಳು ಲಭ್ಯವಿದೆ ಎಂದು ನಿರ್ಮಲಾ ಸೀತಾರಾಮನ್, ವಿಶ್ವದ ಮುಂಚೂಣಿ ಉದ್ಯಮಿಗಳು ಹಾಗೂ ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿದರು. ಈ ಸಮಾವೇಶವನ್ನು ಭಾರತದ ಕೈಗಾರಿಕೋದ್ಯಮಿಗಳ ಒಕ್ಕೂಟ ಮತ್ತು ಅಮೆರಿಕ-ಭಾರತ ಜಂಟಿ ಸಹಭಾಗಿತ್ವ ವೇದಿಕೆ ಆಯೋಜಿಸಿತ್ತು.

ಭಾರತದಲ್ಲಿ ನವೋದ್ಯಮಗಳು ಅತ್ಯುತ್ತಮ ಪ್ರಗತಿ ಸಾಧಿಸಿವೆ. ಷೇರುಪೇಟೆಗಳಿಂದಲೂ ಸಾಕಷ್ಟ ಕಂಪನಿಗಳು ಹಣ ಗಳಿಸುತ್ತಿವೆ. ಇದೊಂದೇ ವರ್ಷದಲ್ಲಿ 16 ನವೋದ್ಯಮಗಳು ಯೂನಿಕಾರ್ನ್ (ಅತ್ಯುತ್ತಮ ಸ್ಟಾರ್ಟ್​ಅಪ್​ಗಳು) ಅರ್ಹತೆ ಪಡೆದಿವೆ ಎಂದು ಅವರು ಹೇಳಿದರು. ಅತ್ಯಂತ ಸಂಕಷ್ಟದ ಸಮಯದಲ್ಲಿಯೂ ಭಾರತವು ಡಿಜಿಟಲೀಕರಣ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿತು.

ಹಣಕಾಸು ಕ್ಷೇತ್ರದಲ್ಲಿ ತಂತ್ರಜ್ಞಾನದ ಪಾತ್ರ ದೊಡ್ಡದು. ಆರ್ಥಿಕ ಸೇರ್ಪಡೆ ಮತ್ತು ಹಣಕಾಸು ತಂತ್ರಜ್ಞಾನ ಸಂಸ್ಥೆಗಳ ಪಾತ್ರ ಇದರಲ್ಲಿ ಬಹುಮುಖ್ಯವಾದುದು. ಮಾಸ್ಟರ್​ಕಾರ್ಡ್​ ಕಂಪನಿಯ ಕಾರ್ಯಕಾರಿ ನಿರ್ದೇಶಕ ಅಜಯ್ ಬಂಗಾ, ಸಿಇಒ ಮೈಕೆಲ್ ಮೀಬಾಚ್, ಫೆಡ್​ಎಕ್ಸ್​ ಕಾರ್ಪೊರೇಷನ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜ್ ಸುಬ್ರಹ್ಮಣ್ಯಂ, ಸಿಟಿ ಸಿಇಒ ಜೇನ್ ಫ್ರೇಸರ್ ಮತ್ತು ಐಬಿಎಂ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ್ ಕೃಷ್ಣ ಅವರನ್ನು ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು