Categories: ವಿದೇಶ

ಭಾರತದ ವಿದೇಶಾಂಗ ನೀತಿಯನ್ನು ಕೊಂಡಾಡಿದ ರಷ್ಯಾ ವಿದೇಶಾಂಗ ಸಚಿವ ಸರ್ಗೆ

ಭಾರತದ ವಿದೇಶಾಂಗ ನೀತಿ ಹಾಗೂ ವಿದೇಶಾಂಗ ಮಂತ್ರಿ ಜೈ ಶಂಕರ್‌ ಅವರನ್ನು ರಷ್ಯಾ ವಿದೇಶಾಂಗ ಸಚಿವ ಸರ್ಗೆ ಹಾಡಿ ಹೊಗಳಿದ್ದಾರೆ. ಎಷ್ಟೇ ಒತ್ತಡವಿದ್ದರೂ ಭಾರತ ಮಾತ್ರ ತನ್ನ ವಿದೇಶಾಂಗ ನೀತಿಗೆ ಬದ್ದವಾಗಿದೆ. ಜೈಶಂಕರ್‌ ನಿಜವಾದ ದೇಶಭಕ್ತ ಹಾಗೂ ರಾಜತಾಂತ್ರಿಕ ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ರಷ್ಯಾ-ಉಕ್ರೇನ್ ನಡುವಿನ ಯುದ್ಧದಲ್ಲಿ ಭಾರತದ ನಿಲುವನ್ನು ಶ್ಲಾಘಿಸಿದರು. ಉಕ್ರೇನ್ ವಿರುದ್ಧ ಯುದ್ಧದ ಹಿನ್ನೆಲೆಯಲ್ಲಿ ಅನೇಕ ದೇಶಗಳು ರಷ್ಯಾದ ಮೇಲೆ ನಿರ್ಬಂಧಗಳನ್ನು ವಿಧಿಸಿವೆ. ಅಮೆರಿಕಾ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ಭಾರತದ ಮೇಲೂ ಇದೇ ರೀತಿ ಒತ್ತಡ ಹೇರುತ್ತಿವೆ. ರಷ್ಯಾದಿಂದ ಆಮದು ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸುವಂತೆ ಭಾರತಕ್ಕೂ ಸಲಹೆ ನೀಡಲಾಗಿದೆ ಎಂದರು.

ಅಂತಾರಾಷ್ಟ್ರೀಯ ಒತ್ತಡಗಳಿಗೆ ನಮ್ಮ ದೇಶ ಮಣಿದಿಲ್ಲ. ನಮ್ಮ ದೇಶದ ಅಗತ್ಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದೆ. ವಿಶೇಷವಾಗಿ ರಷ್ಯಾದ ವಿರುದ್ಧ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. “ನಾವು ನಮ್ಮ ದೇಶಕ್ಕಾಗಿ ಮಾತ್ರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ನಮ್ಮ ನಿರ್ಧಾರಗಳು ರಾಷ್ಟ್ರೀಯ ಭದ್ರತೆ ಮತ್ತು ಅಭಿವೃದ್ಧಿಯ ಪ್ರಯೋಜನಕ್ಕಾಗಿ ಮಾತ್ರ ಎಂದು ಜೈ ಶಂಕರ್ ಹೇಳಿದ್ದರು.

ಈ ವಿಚಾರವನ್ನು ರಷ್ಯಾ ವಿದೇಶಾಂಗ ಸಚಿವರು ಸ್ಮರಿಸಿ, ಈ ರೀತಿಯ ನಿರ್ಧಾರಗಳನ್ನು ಯಾವುದೇ ದೇಶ ಸಾರ್ವಜನಿಕವಾಗಿ ಹೇಳುವುದಿಲ್ಲ. ಆದರೆ ಭಾರತ ಇದರ ಹೊರತಾಗಿದೆ ಎಂದು ಸೆರ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತ ನಮಗೆ ಅತ್ಯಂತ ಸ್ನೇಹಪರ ದೇಶವಾಗಿದೆ. ಒಂದಾನೊಂದು ಕಾಲದಲ್ಲಿ ಎರಡೂ ದೇಶಗಳ ನಡುವೆ ಕಾರ್ಯತಂತ್ರದ ಪಾಲುದಾರಿಕೆ ಇತ್ತು. ನಾವು ಈಗ ಭಾರತವನ್ನು ಅತ್ಯಂತ ವಿಶೇಷವಾದ ಕಾರ್ಯತಂತ್ರದ ಪಾಲುದಾರ ಎಂದು ಪರಿಗಣಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರ ‘ಮೇಕಿಂಗ್ ಇಂಡಿಯಾ’ ಪ್ರಸ್ತಾವನೆಗೂ ಸೆರ್ಗೆಯ್ ಬೆಂಬಲ ನೀಡಿದ್ದಾರೆ. ಪ್ರಸ್ತಾವನೆಗೆ ಅನುಗುಣವಾಗಿ ರಷ್ಯಾದ ಹಲವು ಉತ್ಪನ್ನಗಳನ್ನು ಭಾರತದಲ್ಲಿ ತಯಾರಿಸಲಾಗುತ್ತಿದೆ ಎಂದರು. ರಕ್ಷಣಾ ಕ್ಷೇತ್ರದಲ್ಲಿ ಭಾರತಕ್ಕೆ ಯಾವುದೇ ನೆರವು ನೀಡಲು ರಷ್ಯಾ ಸಿದ್ಧವಿದೆ ಎಂಬ ಮಾತನ್ನು ಸ್ಪಷ್ಟಪಡಿಸಿದ್ದಾರೆ.

Sneha Gowda

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

1 hour ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

2 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

2 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

2 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

4 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

4 hours ago