ನವದೆಹಲಿ: ಭಿನ್ನಾಭಿಪ್ರಾಯವನ್ನು ಬದಿಗಿಟ್ಟು ಕೊವಿಡ್-19 ವಿರುದ್ಧ ಹೋರಾಡಲು ಕೈಜೋಡಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಅವರು ಸರ್ವ ಪಕ್ಷ ಸಭೆಯಲ್ಲಿ ಕರೆ ನೀಡಿದರು.
ಕೊರೋನಾ ವೈರಸ್ ಪರೀಕ್ಷೆಯು ರಾಜಧಾನಿಯಲ್ಲಿ ಪ್ರತಿಯೊಬ್ಬರಿಗೂ ಲಭ್ಯವಾಗಿ ಇರಲಿದೆ ಎಂದು ಅವರು ಇದೇ ವೇಳೆ ಘೋಷಿಸಿದರು.
ಎಲ್ಲಾ ಪಕ್ಷಗಳು ಜತೆಯಾಗಿ ಜನರ ನಂಬಿಕೆಗೆ ತಕ್ಕಂತೆ ಕೆಲಸ ಮಾಡಬೇಕಾಗಿದೆ ಮತ್ತು ದೆಹಲಿಯಲ್ಲಿ ಕೊವಿಡ್-19 ಸಮಸ್ಯೆಯು ಸ್ವಲ್ಪ ಸಮಯದಲ್ಲೇ ಸಾಮಾನ್ಯವಾಗಲಿದೆ ಎಂದು ಅವರು ಹೇಳಿದರು.
ದೆಹಲಿಯಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ಸರ್ವ ಪಕ್ಷಗಳ ಸಭೆ ನಡೆಸಿದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿ ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯಾ, ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ಸರ್ವ ಪಕ್ಷ ಸಭೆಗೆ ಗೈರು ಹಾಜರಾಗಿದ್ದರು.
ಆಮ್ ಆದ್ಮಿ ಪಕ್ಷದ ಶಾಸಕ ಸಂಜಯ್ ಸಿಂಗ್, ಕಾಂಗ್ರೆಸ್, ಬಿಜೆಪಿ ಮತ್ತು ಬಹುಜನ ಸಮಾಜವಾದಿ ಪಕ್ಷದ ನಾಯಕರು ಸಭೆಯಲ್ಲಿ ಭಾಗಿಯಾದರು.