ನವದೆಹಲಿ: ಮಗನ ಸೋಲಿನಿಂದ ಸಿಎಂ ಕುಮಾರಸ್ವಾಮಿ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಅವರು ಟೀಕಿಸಿದ್ದಾರೆ.
ಸಿಎಂ ಕುಮಾರಸ್ವಾಮಿ ಅವರು ಈಚೆಗೆ ಜನರ ಬಳಿ ಮಾತನಾಡುವ ವೇಳೆ, ‘ಚುನಾವಣೆಯಲ್ಲಿ ಮೋದಿಗೆ ವೋಟು ಹಾಕ್ತೀರಿ. ಸಮಸ್ಯೆ ಪರಿಹಾರಕ್ಕೆ ನಮ್ಮ ಹತ್ರ ಬರುತ್ತೀರಿ ಎಂದಿದ್ದರು.
ಈ ಹೇಳಿಕೆ ಸಂಬಂಧ ಸಂಸತ್ ನ ಹೊರಭಾಗದಲ್ಲಿ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಜನರು ಕುಮಾರಸ್ವಾಮಿಗೆ ಮತ ಚಲಾಯಿಸಿಲ್ಲ. ಮತ್ಯಾಕೆ ಅವರು ಮುಖ್ಯಮಂತ್ರಿಯಾಗಿದ್ದಾರೆ?ಕಾಂಗ್ರೆಸ್ ಜತೆಗಿನ ಮೈತ್ರಿಯಿಂದ ಅವರು ಮುಖ್ಯಮಂತ್ರಿಯಾಗಿದ್ದಾರೆ. ಮಗನ ಸೋಲಿನಿಂದ ಕುಮಾರಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಹೇಳಿದರು.