News Karnataka Kannada
Monday, May 06 2024
ವಿದೇಶ

ಮಾತುಕತೆ ಮೂಲಕ ಗಡಿ ವಿವಾದ ಇತ್ಯರ್ಥಕ್ಕೆ ಪಾಕ್ ಸಿದ್ಧ: ಇಮ್ರಾನ್ ಖಾನ್ ಸರಣಿ ಟ್ವೀಟ್

Photo Credit :

ಮಾತುಕತೆ ಮೂಲಕ ಗಡಿ ವಿವಾದ ಇತ್ಯರ್ಥಕ್ಕೆ ಪಾಕ್ ಸಿದ್ಧ: ಇಮ್ರಾನ್ ಖಾನ್ ಸರಣಿ ಟ್ವೀಟ್

ಇಸ್ಲಾಮಾಬಾದ್‌: ಸರಣಿ ಟ್ವೀಟ್ ಮಾಡುವ ಮೂಲಕ ಮಾತುಕತೆ ಮೂಲಕ ಗಡಿ ವಿವಾದ ಇತ್ಯರ್ಥಕ್ಕೆ ಪಾಕಿಸ್ತಾನ ಸಿದ್ಧ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಈ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ನಾವು ಶಾಂತಿ ಕಾಪಾಡಲು ಬದ್ಧರಾಗಿದ್ದೇವೆ. ಬಾಕಿ ಉಳಿದಿರುವ ಎಲ್ಲ ವಿವಾದಗಳನ್ನು ಸಹ ಮಾತುಕತೆ ಮೂಲಕ ಇತ್ಯರ್ಥಗೊಳಿಸಲು ಸಿದ್ಧ. ಎಲ್‌ಒಸಿಯ ಉದ್ದಕ್ಕೂ ಕದನ ವಿರಾಮವನ್ನು ಮರುಸ್ಥಾಪಿಸುವುದನ್ನು ನಾನು ಸ್ವಾಗತಿಸುತ್ತೇನೆ. ಮುಂದಿನ ಪ್ರಗತಿಗೆ ಅನುವು ಮಾಡಿಕೊಡುವ ವಾತಾವರಣವನ್ನು ಸೃಷ್ಟಿಸುವ ಜವಾಬ್ದಾರಿ ಭಾರತದ ಮೇಲಿದೆ ಎಂದು ಹೇಳಿದರು.

ಅದರೊಂದಿಗೆ ಕಾಶ್ಮೀರದ ಜನರ ಕುರಿತು ಮಾತನಾಡಿರುವ ಇಮ್ರಾನ್ ಖಾನ್, ಯುಎನ್‌ಎಸ್‌ಸಿ ನಿರ್ಣಯಗಳ ಪ್ರಕಾರ ಕಾಶ್ಮೀರಿ ಜನರ ಸ್ವ-ನಿರ್ಣಯದ ದೀರ್ಘಕಾಲದ ಬೇಡಿಕೆ ಮತ್ತು ಹಕ್ಕನ್ನು ಪೂರೈಸಲು ಭಾರತ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ನಾವು ಯಾವಾಗಲೂ ಶಾಂತಿ ಸ್ಫಾಪನೆಯತ್ತ ನಿಂತಿದ್ದೇವೆ ಮತ್ತು ಸಂಭಾಷಣೆಯ ಮೂಲಕ ಬಾಕಿ ಇರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಮುಂದುವರಿಯಲು ಸಿದ್ಧರಾಗಿರುತ್ತೇವೆ ಟ್ವೀಟ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು