ತೆಲಂಗಾಣ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಿ ಆಯ್ಕೆಯಾಗುವುದು ಅವಶ್ಯ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಹೇಳಿದ್ದಾರೆ.
ಭಾರತೀಯ ಜನತಾ ಯುವ ಮೋರ್ಚಾ ಸಭೆಯಲ್ಲಿ ಮಾತನಾಡಿರ ಅವರು, ಎನ್ಡಿಎ ಸರ್ಕಾರದ ಅವಧಿಯಲ್ಲಿ ಹಲವಾರು ಜನಪರ ಯೋಜನೆಗಳನ್ನು ಕೈಗೊಳ್ಳಲಾಗಿದ್ದು, ದೇಶದ ಜನರ ಹಿತಕ್ಕಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೇರುವುದು ಅತ್ಯಂತ ಅವಶ್ಯಕ ಎಂದಿದ್ದಾರೆ.
ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ.
ಈ ನಿಟ್ಟಿನಲ್ಲಿ ಮೋದಿ ಮತ್ತೇ ಪ್ರಧಾನಿಯಾಗುವುದು ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು.