News Karnataka Kannada
Wednesday, May 01 2024
ವಿದೇಶ

ಮ್ಯಾನ್ಮಾರ್-ಭಾರತದ ಗಡಿಯಲ್ಲಿ ಪ್ರದೇಶದಲ್ಲಿ ಪ್ರಬಲ ಭೂಕಂಪನ

Earth Quake 21 7 21
Photo Credit :

ನವದೆಹಲಿ: ಮ್ಯಾನ್ಮಾರ್-ಭಾರತದ ಗಡಿ ಪ್ರದೇಶದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 6.1ರಷ್ಟು ದಾಖಲಾಗಿದೆ ಎಂದು ಭಾರತದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಶುಕ್ರವಾರ ಸಂಭವಿಸಿದ ಭೂಕಂಪನವು “ಬಹಳ ಪ್ರಬಲವಾಗಿದೆ,” ಎಂದು ಚಿತ್ತಗಾಂಗ್‌ನಿಂದ ಘಟನೆಗೆ ಸಾಕ್ಷಿಯಾದವರೊಬ್ಬರು ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್‌ನ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಭೂಕಂಪನದ ಕೇಂದ್ರಬಿಂದುದಿಂದ ಪಶ್ಚಿಮಕ್ಕೆ 184 ಕಿಮೀ (115 ಮೈಲುಗಳು) ದೂರದಲ್ಲಿದೆ ಎಂದು ಗೊತ್ತಾಗಿದೆ.

ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್‌ನ (EMSC) ವೆಬ್‌ಸೈಟ್‌ನಲ್ಲಿ ಮತ್ತು Twitter ನಲ್ಲಿ ಬಳಕೆದಾರರು ಮಾಡಿರುವ ಪೋಸ್ಟ್ ಪ್ರಕಾರ, ಬಾಂಗ್ಲಾದೇಶದ ಚಿತ್ತಗಾಂಗ್ ಮತ್ತು ಕೋಲ್ಕತ್ತಾದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

ಭೂಕಂಪನದ ತೀವ್ರತೆ 5.8:

ಭೂಕಂಪನದ ಕಂಪನದ ತೀವ್ರತೆಯನ್ನು ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್‌ 5.8ಕ್ಕೆ ನಿಗದಿಪಡಿಸಿದೆ. ಈ ಮೊದಲು 6.0 ತೀವ್ರತೆಯನ್ನು ನೀಡಿದ ನಂತರ ಭೂಕಂಪನವು ಮಿಜೋರಾಂನ ಐಜ್ವಾಲ್‌ನಿಂದ ಆಗ್ನೇಯಕ್ಕೆ 126 ಕಿಮೀ ದೂರದಲ್ಲಿದೆ ಎಂದು ಹೇಳಿದೆ.

ಭೂಕಂಪನದ ಕಂಪನದ ತೀವ್ರತೆಯನ್ನು ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್‌ 5.8ಕ್ಕೆ ನಿಗದಿಪಡಿಸಿದೆ. ಈ ಮೊದಲು 6.0 ತೀವ್ರತೆಯನ್ನು ನೀಡಿದ ನಂತರ ಭೂಕಂಪನವು ಮಿಜೋರಾಂನ ಐಜ್ವಾಲ್‌ನಿಂದ ಆಗ್ನೇಯಕ್ಕೆ 126 ಕಿಮೀ ದೂರದಲ್ಲಿದೆ ಎಂದು ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು