ಚೆನ್ನೈ: ರಾಜಕೀಯ ಪ್ರವೇಶಿಸದಂತೆ ವೈದ್ಯರು ನೀಡಿದ ಸಲಹೆ ಹೊರತಾಗಿಯೂ ಸೂಪರ್ ಸ್ಟಾರ್ ರಜನಿಕಾಂತ್ ಸೋಮವಾರ ರಾಜಕೀಯ ಪ್ರವೇಶ ಕುರಿತಂತೆ ತಮ್ಮ ವೇದಿಕೆಯ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಜನಿ ಮಕ್ಕಳ್ ಮಂದ್ರಾಮ್ ಜಿಲ್ಲಾ ಕಾರ್ಯದರ್ಶಿಗಳ ಸಭೆ ಚೆನ್ನೈನಲ್ಲಿನ ರಾಘವೇಂದ್ರ ಕಲ್ಯಾಣ ಮಂದಪಂನಲ್ಲಿ ಇಂದು ನಡೆಯಲಿದೆ ಎಂದು ಮಂದ್ರಾಮ್ ಹೇಳಿದೆ.
ರಜನಿ ಮಕ್ಕಳ್ ಮಂದ್ರಾಮ್ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ರಾಜಕೀಯ ಪ್ರವೇಶದ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಜನಿಕಾಂತ್ ಹೇಳಿದ್ದರು. ಸೋಮವಾರ ಈ ಸಭೆ ನಡೆಯಲಿದೆ.
ಮುಂದಿನ ವರ್ಷ ಏಪ್ರಿಲ್- ಮೇ ತಿಂಗಳಿನಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದ್ದು, ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿದ ನಂತರ ತಮ್ಮ ನಿಲುವನ್ನು ತಿಳಿಸುವುದಾಗಿ ರಜನಿಕಾಂತ್ ಸ್ವತಃ ಹೇಳಿದ್ದರಿಂದ ರಾಜಕೀಯ ಪ್ರವೇಶದ ಸಾಧ್ಯತೆಯನ್ನು ಪ್ರಕಟಿಸಬಹುದೆಂದು ನಿರೀಕ್ಷಿಸಲಾಗಿದೆ.