ನವದೆಹಲಿ: ಇಂದು ಬೆಳಗ್ಗೆ ಖಾರ್ಕಿವ್ನಲ್ಲಿ ನಡೆದ ರಷ್ಯಾದ ಶೆಲ್ ದಾಳಿಗೆ ಭಾರತೀಯ ವಿದ್ಯಾರ್ಥಿ ಬಲಿಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ದೃಢಪಡಿಸಿದೆ.
ಕಳೆದ ಕೆಲ ದಿನಗಳಿಂದ ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಿಂದ ಭಾರತೀಯರು ಆತಂಕಕ್ಕೆ ಒಳಗಾಗಿದ್ದಾರೆ. ಉಕ್ರೇನ್ನಲ್ಲಿ ಸಿಲುಕಿರುವ ನಮ್ಮವರಿಗಾಗಿ ಕುಟುಂಬಸ್ಥರು ಪರಿತಪಿಸಿದ್ದಾರೆ. ನಿನ್ನೆಯಷ್ಟೇ ಕೆಲ ವಿದ್ಯಾರ್ಥಿಗಳು ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಆಗಿದ್ದಾರೆ.
ಯುದ್ಧ ಪೀಡಿತ ಪ್ರದೇಶದಲ್ಲೇ ಉಳಿದಿರುವ ಭಾರತೀಯರು ಆದಷ್ಟು ಬೇಗ ನಮ್ಮನ್ನು ರಕ್ಷಿಸಿ ಎಂದು ವಿಡಿಯೋಗಳ ಮೂಲಕ ಬೇಡಿಕೊಳ್ಳುತ್ತಿದ್ದಾರೆ. ಇಂಥ ಸಂದರ್ಭದಲ್ಲೇ ಭಾರತೀಯರ ಪಾಲಿಗೆ ಆಘಾತಕಾರಿ ಸುದ್ದಿ ಹೊರ ಬಿದ್ದಿದೆ. ಇಂದು ಬೆಳಗ್ಗೆ ಖಾರ್ಕಿವ್ನಲ್ಲಿ ನಡೆದ ರಷ್ಯಾದ ಶೆಲ್ ದಾಳಿಗೆ ಭಾರತೀಯ ವಿದ್ಯಾರ್ಥಿ ಬಲಿಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ದೃಢಪಡಿಸಿದೆ. ಮೃತ ವಿದ್ಯಾರ್ಥಿ ನಮ್ಮ ರಾಜ್ಯದ ಹಾವೇರಿ ಜಿಲ್ಲೆಯ ನವೀನ್ (21) ಆಗಿದ್ದು ರಾಜ್ಯದ ಪಾಲಿಗೆ ದುಃಖಕರವಾಗಿದೆ.