ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹಂತಕರನ್ನು ಜೈಲಿನಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಸ್ಪಷ್ಟಪಡಿಸಿದೆ.
ರಾಜೀವ್ ಗಾಂಧಿಯ ಏಳು ಮಂದಿ ಹಂತಕರನ್ನು ಬಿಡುಗಡೆ ಮಾಡಬೇಕೆಂದು ತಮಿಳುನಾಡು ಸರ್ಕಾರವು ಪ್ರಸ್ತಾಪ ಸಲ್ಲಿಸಿತ್ತು. ಆದರೆ ಇದಕ್ಕೆ ಸಿಬಿಐ ಕೂಡ ವಿರೋಧ ವ್ಯಕ್ತಪಡಿಸಿತ್ತು. ಇದರ ವಿಚಾರಣೆಯು ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳಿತ್ತು. ಆದರೆ ಕೇಂದ್ರವು ಹಂತಕರ ಬಿಡುಗಡೆ ಸಾಧ್ಯವಿಲ್ಲವೆಂದು ಸ್ಪಷ್ಟವಾಗಿ ಹೇಳಿದೆ.
ರಾಜೀವ್ ಗಾಂಧಿ ಅವರ ಹಂತಕರನ್ನು ಬಿಡುಗಡೆ ಮಾಡಿದರೆ ಅದರಿಂದ ದೇಶದ ಜನರಿಗೆ ಹಾಗೂ ವಿಶ್ವಕ್ಕೆ ಕೆಟ್ಟ ಸಂದೇಶ ರವಾನೆಯಾಗುತ್ತದೆ ಮತ್ತು ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಣಾಮ ಬೀರುತ್ತದೆ ಎಂದು ಕೇಂದ್ರ ತಿಳಿಸಿದೆ.