ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಕೂಟವು ಅಧಿಕಾರಕ್ಕೆ ಬಂದಿರುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಗೆಲುವು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.
ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರಿಗೆ ಅಭಿನಂದನೆ ಸಲ್ಲಿಸಿದರು.
ಇದೇ ವೇಳೆ ಬಿಜೆಪಿಯನ್ನು ಟೀಕಿಸಿದ ರಾಹುಲ್ ಗಾಂಧಿ, ದೇಶದಲ್ಲಿ ಇರುವ ಎಲ್ಲಾ ರಾಜ್ಯಪಾಲರುಗಳು ಆರ್ ಎಸ್ ಎಸ್ ಹಿನ್ನೆಲೆಯವರು. ಇದರಿಂದ ಬಿಜೆಪಿ ಅವರನ್ನು ಬಳಸಿಕೊಳ್ಳುತ್ತಿದೆ ಎಂದು ರಾಹುಲ್ ಗಾಂಧಿ ತಿಳಿಸಿದರು.
ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಶಾಸಕರನ್ನು ಸೆಳೆಯಲು ಬಿಜೆಪಿ ನಾಯಕರು ಕುದುರೆ ವ್ಯಾಪಾರ ಮಾಡಿದರು. ಆದರೆ ಇದರಲ್ಲಿ ವಿಫಲರಾದರು. ಇದರ ಬಗ್ಗೆ ಮೊಬೈಲ್ ಸಂಭಾಷಣೆ ಕೂಡ ಬಿಡುಗಡೆಯಾಗಿದೆ. ಇದು ಬಿಜೆಪಿ, ಆರ್ ಎಸ್ ಎಸ್ ತಕ್ಕ ಪಾಠ ಕಲಿತೆ ಎಂದರು.
ಬಿಜೆಪಿಯವರು ರಾಷ್ಟ್ರಗೀತೆ ಆಗುವ ಮೊದಲೇ ಸದನದಿಂದ ಹೊರನಡೆದು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.