ನವದೆಹಲಿ : ದೇಶಾದ್ಯಂತ ಕೊರೋನಾ ಆರ್ಭಟ ಹೆಚ್ಚುತ್ತಿದ್ದು, ರಾಜಧಾನಿ ದೆಹಲಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡು ಬರುತ್ತಿದೆ. ಕೊರೋನಾ ಸಾಂಕ್ರಾಮಿಕ ರೋಗ ತಡೆ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಲ್ಲಿ ಮುಖ್ಯವಾಗಿ ರಾತ್ರಿ ಕರ್ಫ್ಯೂ ಜಾರಿ ಮಾಡಿದೆ.
ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ತನಕ ಇದು ಜಾರಿಯಲ್ಲಿ ಇರಲಿದ್ದು, ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ನೇತೃತ್ವದ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ .
ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ದೆಹಲಿಯಲ್ಲಿ ಹೊಸದಾಗಿ 3548 ಕೊರೋನಾ ಪ್ರಕರಣ ವರದಿಯಾಗಿದ್ದು, 15 ಮಂದಿ ಕೊರೋನಾ ದಿಂದ ಪ್ರಾಣ ಕಳೆದುಕೊಂಡಿದ್ದಾರೆ . ಮುಂದಿನ ಎರಡು ವಾರಗಳಲ್ಲಿ ದೆಹಲಿಯಲ್ಲಿ ಕೊರೋನಾ ಪರಿಸ್ಥಿತಿ ಗಂಭೀರ ಹಂತ ತಲುಪಲಿದೆ ಎಂಬ ಪರಿಣಿತರ ವರದಿ ಹಿನ್ನೆಲೆಯಲ್ಲಿ ದೆಹಲಿ ಆಡಳಿತ ರಾತ್ರಿ ಕರ್ಪ್ಯೂ ಜಾರಿಗೆ ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ.