News Karnataka Kannada
Saturday, April 27 2024
ವಿದೇಶ

ರಾಮಮಂದಿರ ನಿರ್ಮಾಣಕ್ಕೆ 30 ಲಕ್ಷ ದೇಣಿಗೆ ನೀಡಿದ ನಟ ಪವನ್ ಕಲ್ಯಾಣ್

Photo Credit :

ರಾಮಮಂದಿರ ನಿರ್ಮಾಣಕ್ಕೆ 30 ಲಕ್ಷ ದೇಣಿಗೆ ನೀಡಿದ ನಟ ಪವನ್ ಕಲ್ಯಾಣ್

ತಿರುಪತಿ: ಅಯೋಧ್ಯ ರಾಮಮಂದಿರ ನಿರ್ಮಾಣಕ್ಕೆ 30 ಲಕ್ಷ ರೂ ದೇಣಿಗೆ ನೀಡಿದ ಟಾಲಿವುಡ್ ನಟ ಹಾಗೂ ಜನಸೇನಾ ಪಕ್ಷದ ಸ್ಥಾಪಕ ಪವನ್ ಕಲ್ಯಾಣ್.

ತಿರುಪತಿಯಲ್ಲಿ ನಡೆದ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತಿರುಪತಿ ವೆಂಕಟರಮಣ ದೇವಸ್ಥಾನಕ್ಕೆ ಶುಕ್ರವಾರ ಭೇಟಿನೀಡಿದ ಪವನ್ ಕಲ್ಯಾಣ್, ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ 30 ಲಕ್ಷ ದೇಣಿಗೆ ನೀಡುವುದಾಗಿ ಘೋಷಿಸಿದರು. ಅಷ್ಟೇ ಅಲ್ಲದೆ ಸ್ಥಳದಲ್ಲಿಯೇ 1,10,000 ಡಿಡಿಯನ್ನು ತಿರುಪತಿಯ ಆರ್ ಎಸ್ ಎಸ್ ಮುಖಂಡರಿಗೆ ಹಸ್ತಾಂತರಿಸಿದರು.

ನಂತರ ಮಾತನಾಡಿದ ಅವರು, ಮನುಕುಲಕ್ಕೆ ತಾಳ್ಮೆ ಶಾಂತಿ ಹಾಗೂ ಧೈರ್ಯದ ಹಾದಿಯನ್ನು ತೋರಿಸಿಕೊಟ್ಟಿರುವ ಶ್ರೀರಾಮನ ಮಂದಿರವನ್ನು ನಿರ್ಮಿಸಲು ನಾವೆಲ್ಲರೂ ಕೈಜೋಡಿಸಬೇಕು. ಇದೊಂದು ಸಂತೋಷದ ಸಂಗತಿ. ಇಂತಹ ಮಹತ್ತರ ಕಾರ್ಯಕ್ಕೆ ಸಾಮಾನ್ಯ ಜನರು ಕೂಡ ದೇಣಿಗೆ ನೀಡಲು ಮುಂದಾಗಿದ್ದಾರೆ. ಇದು ಎಲ್ಲರಿಗೂ ಹೆಮ್ಮೆ ತರುವ ವಿಷಯವಾಗಿದೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು