ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ದುಷ್ಕರ್ಮಿಗಳು ಆಫ್ಘಾನಿಸ್ತಾನದ ರಾಯಭಾರಿಯ ಮಗಳನ್ನು ಅಪಹರಿಸಿ ಚಿತ್ರಹಿಂಸೆ ನೀಡಿದ ಘಟನೆಯಿಂದ ಅಫ್ಘಾನಿಸ್ಥಾನ ಕೆಂಡಾಮಂಡಲವಾಗಿದೆ. ಈ ಘಟನೆಯ ನಂತರ ಪಾಕಿಸ್ತಾನ ಜಾಗತಿಕವಾಗಿ ತೀವ್ರ ಮುಖಭಂಗ ಅನುಭವಿಸುವಂತಾಗಿದ್ದು, ತಲೆತಗ್ಗಿಸುವಂತಾಗಿದೆ.
ಕಳೆದ ಜುಲೈ 16ರಂದು ಅಫ್ಘಾನಿಸ್ತಾನದ ರಾಯಭಾರಿಯ ಮಗಳಾದ ಸಿಲ್ಸಿಲಾ ಅಲಿಖಿಲ್ ಅವರನ್ನು ಅಪಹರಣ ಮಾಡಲಾಗಿತ್ತು. ಅವರು ತಮ್ಮ ಮನೆಗೆ ತೆರಳುತ್ತಿದ್ದ ಮಾರ್ಗಮಧ್ಯೆ ಅಪರಿಚಿತರು ಅವರನ್ನು ಅಪಹರಿಸಿ ಮಾಡಿ ಚಿತ್ರಹಿಂಸೆ ನೀಡಿದ್ದರು. ಅಪಹರಣಕಾರರಿಂದ ಬಿಡುಗಡೆ ಹೊಂದಿದ ಬಳಿಕ ಸಿಲ್ಸಿಲಾ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಅಪಹರಣದಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿರುವ ತನ್ನ ರಾಯಭಾರಿ ಮತ್ತು ಹಿರಿಯ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿದೆ. ಎಲ್ಲಾ ಭದ್ರತಾ ಬೆದರಿಕೆಗಳನ್ನು ಪರಿಹರಿಸುವವರೆಗೆ ಆಫ್ಘಾನಿಸ್ತಾನದ ರಾಯಭಾರಿ ಮತ್ತು ಪಾಕಿಸ್ತಾನದ ಹಿರಿಯ ರಾಜತಾಂತ್ರಿಕರನ್ನು ಆಫ್ಘನ್ ಸರ್ಕಾರ ವಾಪಸ್ ಕರೆಸಿಕೊಳ್ಳಲಾಗುವುದು ಎಂದು ಸರ್ಕಾರ ಹೇಳಿದೆ.
ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಎದುರಾಗಿದೆ. ಪಾಕಿಸ್ತಾನಕ್ಕೆ ಅಫ್ಘನ್ ನಿಯೋಗವು ಶೀಘ್ರದಲ್ಲೇ ಭೇಟಿ ನೀಡಲಿದ್ದು, ಈ ಪ್ರಕರಣ ಮತ್ತು ಎಲ್ಲಾ ಸಂಬಂಧಿತ ಸಮಸ್ಯೆಗಳ ಚರ್ಚೆಗೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…