ನವದೆಹಲಿ: ಜಮ್ಮು-ಕಾಶ್ಮೀರ ವಿಚಾರದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಯು ಪಾಕಿಸ್ತಾನಕ್ಕೆ ನೆರವಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜವಾಡೇಕರ್ ಆರೋಪಿಸಿದರು.
ಜಮ್ಮುಕಾಶ್ಮೀರದಲ್ಲಿ 370ನೇ ವಿಧಿಯನ್ನು ತೆಗೆದುಹಾಕಿರುವ ವಿರುದ್ಧವಾಗಿ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ಪಾಕಿಸ್ತಾನಕ್ಕೆ ಲಾಭ ಉಂಟು ಮಾಡಿದ್ದು, ಕಾಂಗ್ರೆಸ್ ನ ಹೇಳಿಕೆಯಿಂದ ರಾಷ್ಟ್ರವೇ ತಲೆತಗ್ಗಿಸುವಂತಾಗಿದೆ ಎಂದು ಅವರು ಹೇಳಿದರು.
ಜಮ್ಮುಕಾಶ್ಮೀರದಲ್ಲಿನ ಪರಿಸ್ಥಿತಿ ಸರಿಯಾಗಿಲ್ಲ ಮತ್ತು ಅಲ್ಲಿ ಜನರು ಸಾಯುತ್ತಿದ್ದಾರೆ ಎಂದು ರಾಹುಲ್ ಪದೇ ಪದೇ ಬಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರು. ಇದನ್ನು ಪಾಕ್ ಬಳಸಿಕೊಂಡಿದೆ ಎಂದರು.