ನವದೆಹಲಿ: ರೋಹಿಂಗ್ಯಾಗಳನ್ನು ಮ್ಯಾನ್ಮಾರ್ ಗೆ ಗಡಿಪಾರು ಮಾಡುವ ಬಗ್ಗೆ ಕೇಂದ್ರ ಸರ್ಕಾರದ ನಿರ್ಧಾರದಲ್ಲಿ ತಾನು ಹಸ್ತಕ್ಷೇಪ ಮಾಡುವುದಿಲ್ಲವೆಂದು ಸುಪ್ರೀಂಕೋರ್ಟ್ ಗುರುವಾರ ಸ್ಪಷ್ಟಪಡಿಸಿದೆ.
ರೋಹಿಂಗ್ಯಾಗಳನ್ನು ಮ್ಯಾನ್ಮಾರ್ ತನ್ನ ಪ್ರಜೆಗಳೆಂದು ಒಪ್ಪಿಕೊಂಡಿದೆ. ಹೀಗಾಗಿ ಗಡಿಪಾರು ಮಾಡುವ ವಿಚಾರದಲ್ಲಿ ತಾನು ತಲೆ ಹಾಕಲ್ಲ. ಇಲ್ಲಿ ಬಂದು ಅಕ್ರಮವಾಗಿ ನೆಲೆಸಿರುವ ರೋಹಿಂಗ್ಯಾಗಳನ್ನು ಗಡಿಪಾರು ಮಾಡುವ ಕೇಂದ್ರದ ನಿರ್ಧಾರದಲ್ಲಿ ಹಸ್ತಕ್ಷೇಪವಿಲ್ಲವೆಂದು ಸುಪ್ರೀಂಕೋರ್ಟ್ ನ ನೂತನ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇತೃತ್ವರದ ಪೀಠವು ಹೇಳಿದೆ.
ರೋಹಿಂಗ್ಯಾಗಳನ್ನು ಗಡಿಪಾರು ಮಾಡುವ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರ ವಿರುದ್ಧ ಸುಪ್ರೀಂಗೆ ಅರ್ಜಿ ಕೂಡ ಸಲ್ಲಿಸಲಾಗಿತ್ತು.