News Karnataka Kannada
Saturday, May 11 2024
ವಿದೇಶ

ಲಾಕ್‍ಡೌನ್ ವೇಳೆ ಶಿರಸಿಯಲ್ಲಿ ಸರಣಿ ಅಂಗಡಿ ಕಳ್ಳತನ

Photo Credit :

ಲಾಕ್‍ಡೌನ್ ವೇಳೆ  ಶಿರಸಿಯಲ್ಲಿ ಸರಣಿ ಅಂಗಡಿ ಕಳ್ಳತನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಹುಬ್ಬಳ್ಳಿ ರಸ್ತೆಯಲ್ಲಿರುವ ಔಷಧ ಮಳಿಗೆಯೊಂದರಲ್ಲಿ ಕಳ್ಳತನ ನಡೆದಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಇಷ್ಟಲ್ಲದೇ ಇನ್ನೂ ಮೂರು ಮಳಿಗೆಗಳಲ್ಲಿ ಖದೀಮರು ಕಳ್ಳತನ ಮಾಡಲು ಯತ್ನಿಸಿರುವುದು ಪತ್ತೆಯಾಗಿದೆ.
ಆರ್.ಕೃಷ್ಣ ಎಂಬವರ ಮಳಿಗೆಯ ಬಾಗಿಲು ಮುರಿದ ಕಳ್ಳರು 20 ಸಾವಿರ ನಗದು ಮತ್ತು ಲ್ಯಾಪ್‍ಟಾಪ್ ಹೊತ್ತೊಯ್ದಿದ್ದು, ಭಾನುವಾರ ಸಂಜೆ ದೂರು ದಾಖಲಾಗಿದೆ. ಸಿ.ಪಿ.ಬಝಾರದಲ್ಲಿರುವ ಸ್ಟೇಶನರಿ ಅಂಗಡಿ, ಉಣ್ಣೆಮಠ ಗಲ್ಲಿಯಲ್ಲಿರುವ ಬಟ್ಟೆ ಅಂಗಡಿಯ ಬಾಗಿಲನ್ನು ಕೂಡ ಮುರಿಯಲಾಗಿದ್ದು, ಇಲ್ಲೇ ಸಮೀಪದಲ್ಲಿರುವ ಪಾತ್ರೆ ಅಂಗಡಿಯೊಂದರ ಚಾವಣಿ ಮೂಲಕ ಒಳನುಗ್ಗಿದ್ದ ಕಳ್ಳರು ಕಳ್ಳತನ ಮಾಡಲು ಯತ್ನಿಸಿದ್ದಾರೆ. ಆದರೆ ಇಲ್ಲಿ ಯಾವುದೇ ಕಳುವಾಗಿಲ್ಲ ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಘಟನೆ ಸ್ಥಳದಲ್ಲಿ ಶ್ವಾನದಳದವರು ಪರಿಶೀಲನೆ ನಡೆಸಿದ್ದಾರೆ. ತನಿಖೆಗಾಗಿ ಪ್ರತ್ಯೇಕ ತಂಡ ರಚಿಸಲಾಗಿದ್ದು ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು