ವಯಾನಾಡು: ಸರ್ಕಾರಿ ಶಾಲೆಯ ತರಗತಿಯಲ್ಲೇ ಹಾವು ಕಚ್ಚಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ರಾಹುಲ್ ಗಾಂಧಿ ಲೋಕಸಭಾ ಕ್ಷೇತ್ರವಾದ ವಯಾನಾಡುವಿನಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಎಸ್.ಶೆರಿನ್ ಎಂದು ಗುರುತಿಸಲಾಗಿದೆ. ಇಲ್ಲಿನ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನ 3.10ಕ್ಕೆ ಈ ಘಟನೆ ನಡೆದಿದ್ದು, ಶಾಲಾ ಸಿಬ್ಬಂದಿ 3.50 ರ ವರೆಗೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ನಂತರ ಶಾಲೆಯ ಮುಖ್ಯೋಪಾಧ್ಯಯರು 4.09 ಗಂಟೆ ಸುಮಾರಿಗೆ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
4.50ರೊಷ್ಟಿಗೆ ವಿದ್ಯಾರ್ಥಿನಿ ವಾಂತಿ ಮಾಡಲು ಆರಂಭಿಸಿದ್ದಾಳೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಲ್ಲಿ ತಡವಾಗಿದ್ದರಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗುತ್ತಿದೆ.