ಕೇರಳ: ವಿದ್ಯಾರ್ಥಿ ಗುಂಪುಗಳ ನಡುವೆ ನಡೆದ ವಾಗ್ವಾದ ಎಸ್ ಎಫ್ ಐ ಕಾಲೇಜು ನಾಯಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಭಾನುವಾರ ನಡೆದಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿ ಸಂಘಟನೆ ‘ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ’ ಈ ಕೊಲೆ ನಡೆಸಿದೆ ಎನ್ನಲಾಗಿದೆ.
ಇನ್ನೂ ದಾಳಿಯಲ್ಲಿ ಮತ್ತಿಬ್ಬರು ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ರ್ನಾಕುಲಂನ ಮಹಾರಾಜ ಕಾಲೇಜಿಲ್ಲಿ ಈ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಇಡುಕ್ಕಿ ಜಿಲ್ಲೆಯ ವಟ್ಟವಡ ನಿವಾಸಿ ಅಭಿಮನ್ಯು ಎಂದು ಗುರುತಿಸಲಾಗಿದೆ. ಕಾಲೇಜಿನ ಗೋಡೆಯನ್ನು ಬಳಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ನಡುವೆ ಗಲಾಟೆ ಶುರುವಾಗಿದೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪಿಎಫ್ಐ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆಯನ್ನು ಖಂಡಿಸಿ ಇಂದು
ಸಿಪಿಐಎಂನ ವಿದ್ಯಾರ್ಥಿ ಸಂಘಟನೆ ಸ್ಟುಡೆಂಟ್ ಫೆಡರೇಷನ್ ಆಫ್ ಇಂಡಿಯಾ ಕೇರಳ ರಾಜ್ಯ ಬಂದ್ ಗೆ ಕರೆ ನೀಡಿದೆ.