ತಿರುವನಂತಪುರಂ: ಎಲ್ಲಾ ಮಿತಿಗಳನ್ನು ಮೀರಿ ಮಾತನಾಡಿರುವ ಕೇರಳ ದೇವಸ್ವಂ ಮಂಡಳಿ ಮುಖ್ಯಸ್ಥರು ನೀಡಿರುವ ಹೇಳಿಕೆಯು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ.
ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನೀಡಿದರೆ ಶಬರಿಮಲೆ ಕೂಡ ಥಾಯ್ಲೆಂಡ್ ನಂತೆ ಸೆಕ್ಸ್ ಟೂರಿಸಂ ಸ್ಥಳವಾಗಲಿದೆ ಎಂದು ದೇವಸ್ವಂ ಮಂಡಳಿ ಮುಖ್ಯಸ್ಥ ಪ್ರಾಯರ್ ಗೋಪಾಲಕೃಷ್ಣನ್ ನೀಡಿರುವ ಹೇಳಿಕೆಯು ಈಗ ಭಾರೀ ಕೋಲಾಹಲ ಸೃಷ್ಟಿ ಮಾಡಿದೆ.
ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂಬ ಅರ್ಜಿಯನ್ನು ಸುಪ್ರೀಂಕೋರ್ಟ್ ಸಂವಿಧಾನ ಪೀಠಕ್ಕೆ ವರ್ಗಾಯಿಸಿದ ಬಳಿಕ ಗೋಪಾಲಕೃಷ್ಣನ್ ಈ ವಿವಾದಿತ ಹೇಳಿಕೆ ನೀಡಿದ್ದಾರೆ.
ಎಲ್ಲಾ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನೀಡಿದರೆ ಶಬರಿಮಲೆಯಲ್ಲಿ ಅನೈತಿಕ ಚಟುವಟಿಕೆ ಆರಂಭವಾಗಲಿದೆ. ಎಲ್ಲಾ ಮಹಿಳೆಯರಿಗೆ ಭದ್ರತೆ ನೀಡಲು ಸಾಧ್ಯವಿಲ್ಲ. ಮಹಿಳೆಯರು ದೇವಾಲಯ ಪ್ರವೇಶಿಸಲು ಕೋರ್ಟ್ ಆದೇಶಿಸಿದರೂ ಸ್ವಾಭಿಮಾನಿ ಮಹಿಳೆಯರು ಮಾತ್ರ ದೇಗುಲಕ್ಕೆ ಬರಲ್ಲ ಎಂದು ಅವರು ಹೇಳಿದರು.
ಆದರೆ ದೇವಸ್ವಂ ಮಂಡಳಿ ಮುಖ್ಯಸ್ಥರ ಹೇಳಿಕೆಯನ್ನು ಕೇರಳ ಸಚಿವ ಸುರೇಂದ್ರನ್ ತೀವ್ರವಾಗಿ ಆಕ್ಷೇಪಿಸಿದ್ದಾರೆ.