News Karnataka Kannada
Monday, April 29 2024
ವಿದೇಶ

ಶಾಲಾ ವಾಹನಕ್ಕೆ ರೈಲು ಡಿಕ್ಕಿ 13 ಮಕ್ಕಳ ದುರ್ಮರಣ

Photo Credit :

ಶಾಲಾ ವಾಹನಕ್ಕೆ ರೈಲು ಡಿಕ್ಕಿ 13 ಮಕ್ಕಳ ದುರ್ಮರಣ

ಲಖನೌ: ಸ್ಕೂಲ್ ಬಸ್ಸಿಗೆ ರೈಲು ಡಿಕ್ಕಿಯಾದ ಪರಿಣಾಮ 13 ಪುಟ್ಟ ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ಉತ್ತರಪ್ರದೇಶದ ಖುಷಿ ನಗರ ಜಿಲ್ಲೆಯಲ್ಲಿ ನಡೆದಿದೆ. ಗುರುವಾರ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, 13 ಮಕ್ಕಳ ಸಹಿತ 7 ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಚಾಲಕನಿಗೆ ಗಂಭಿರ ಗಾಯಗಳಾಗಿದ್ದು, ಗಾಯಾಳುಗಳನ್ನು ಕುಶಿ ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬನಾರಸ್ ವಿಭಾಗದ ದುಧಿ ರೈಲೈ ನಿಲ್ದಾಣದ ಸಮೀಪ ಬೆಹಪುರ್ ವಾ ಎಂಬಲ್ಲಿ ಬೆಳಗ್ಗೆ ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ವೇಳೆ ಶಾಲಾ ವಾಹನ ಕಾವಲು ರಹಿತ ರೈಲ್ವೆ ಕ್ರಾಸಿಂಗ್ ಬಳಿ ಸಂಚರಿಸುತ್ತಿದ್ದಾಗ, ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ವಕ್ತಾರರೊಬ್ಬರು ಮಾಹಿತಿ ನೀಡಿದ್ದಾರೆ.

ಡಿಕ್ಕಿಯ ರಭಸಕ್ಕೆ ಶಾಲಾ ವಾಹನ ನಜ್ಜು-ಗುಜ್ಜಾಗಿದ್ದು, ವಾಹನದಲ್ಲಿ ಸುಮಾರು 25 ಮಂದಿ ವಿದ್ಯಾರ್ಥಿಗಳಿದ್ದರು ಎಂದು ತಿಳಿದು ಬಂದಿದೆ. ಹೆಚ್ಚಿನವರು 10 ವರ್ಷದ ಒಳಗಿನವರು ಎಂದು ಹೇಳಲಾಗುತ್ತಿದೆ.

ದಾರುಣ ಘಟನೆ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ಸೂಚಿಸಿದ್ದು, ಮೃತಪಟ್ಟವರ ಕುಟುಂಬ ವರ್ಗಕ್ಕೆ ಪರಿಹಾರ ಧನ ಘೋಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
189

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು