News Karnataka Kannada
Monday, April 29 2024
ವಿದೇಶ

 ಶ್ರೀಲಂಕಾಗೆ ಭಾರತ ಸೇನಾಪಡೆ ಕಳುಹಿಸುವ ವರದಿಗಳು ಶುದ್ಧ ಸುಳ್ಳು: ಹೈಕಮಿಷನ್‌ ಸ್ಪಷ್ಟನೆ

Army
Photo Credit :

 ಶ್ರೀಲಂಕಾ: ಭೀಕರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ಹಿಂಸಾಚಾರದ ದಳ್ಳುರಿಯಲ್ಲಿ ಬೇಯುತ್ತಿರುವ ಶ್ರೀಲಂಕಾದ ಕೊಲಂಬೋ  ಸಹಾಯಕ್ಕೆ ಭಾರತವು ತನ್ನ ಸೇನಾಪಡೆ ಕಳುಹಿಸಲಿದೆ ಎಂಬ ವಿಚಾರದ ಕುರಿತಾಗಿ ಮಾಧ್ಯಮಗಳು, ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ವರದಿಯನ್ನು ಶ್ರೀಲಂಕಾದಲ್ಲಿನ ಭಾರತೀಯ ಹೈಕಮಿಷನರ್‌ ಕಚೇರಿ ತಳ್ಳಿಹಾಕಿದೆ.

ಶ್ರೀಲಂಕಾದ ಪ್ರಜಾಪ್ರಭುತ್ವ, ಸ್ಥಿರತೆ ಮತ್ತು ಆರ್ಥಿಕ ಚೇತರಿಕೆಗೆ ಭಾರತವು ಸಂಪೂರ್ಣ ಬೆಂಬಲ ನೀಡುತ್ತಿದೆ. ಆದರೆ ದ್ವೀಪರಾಷ್ಟ್ರಕ್ಕೆ ಸೇನಾಪಡೆ ಕಳುಹಿಸುವ ಕುರಿತಾದ ವರದಿಗಳು ಸಂಪೂರ್ಣ ಊಹಾಪೋಹ. ಆ ವರದಿಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಟ್ವಿಟ್‌ ಮೂಲಕ ಸ್ಪಷ್ಟಪಡಿಸಿದೆ.

ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಅವರ ಕುಟುಂಬ ಸದಸ್ಯರು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂಬ ಸ್ಥಳೀಯ ಸಾಮಾಜಿಕ ಮಾಧ್ಯಮಗಳ ವರದಿಗಳೂ ಸಂಪೂರ್ಣವಾಗಿ ಸುಳ್ಳು ಮತ್ತು ನಕಲಿ ಎಂದು ಸಹ ಭಾರತೀಯ ಹೈಕಮಿಷನ್‌ ನಿರಾಕರಿಸಿದೆ.

ಸೋಮವಾರ ರಾಜೀನಾಮೆ ನೀಡಿದ ನಂತರ ಮಹಿಂದಾ ರಾಜಪಕ್ಸೆ ಭಾರತಕ್ಕೆ ಓಡಿಬಂದ ಊಹಾಪೋಹಗಳು ಕೇಳಿಬಂದಿದ್ದವು. ಮಹಿಂದ ಅವರು ತಮ್ಮ ಕಚೇರಿ-ಅಧಿಕೃತ ನಿವಾಸವಾದ ಟೆಂಪಲ್ ಟ್ರೀಸ್ ತೊರೆದಿದ್ದಾರೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು