Categories: ವಿದೇಶ

ಸಂಸದ ತೇಜಸ್ವಿ ಸೂರ್ಯ ಅವರ ನಕಲಿ ಪಿಏ ಬಂಧನ ; ಚುಚ್ಚುಮದ್ದಿನಲ್ಲಿ ವಂಚನೆ ಯತ್ನ

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಕಚೇರಿ ಸಿಬ್ಬಂದಿ ಎಂಬುದಾಗಿ ಸುಳ್ಳು ಹೇಳಿಕೊಂಡು ರೆಮ್‌ಡಿಸಿವಿರ್ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ಆರೋಪದಡಿ ಚೇತನ್ (26) ಎಂಬಾತನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.
‘ಅಗ್ರಹಾರ ದಾಸರಹಳ್ಳಿ ನಿವಾಸಿ ಚೇತನ್, ಸ್ಥಳೀಯ ವಾರ್‌ರೂಮ್‌ನಲ್ಲಿ ಕೆಲಸ ಮಾಡುತ್ತಿದ್ದ. ಸಂಸದ ತೇಜಸ್ವಿ ಸೂರ್ಯ ಹೆಸರು ಬಳಸಿಕೊಂಡು ಚುಚ್ಚುಮದ್ದು ಮಾರುತ್ತಿದ್ದ. ಈ ಬಗ್ಗೆ ಸಂಸದ ಕಚೇರಿಯ ಆಪ್ತ ಸಹಾಯಕ ಭಾನುಪ್ರಕಾಶ್ ದೂರು ನೀಡಿದ್ದರು’ ಎಂದು ಪೊಲೀಸರು ಹೇಳಿದರು. ‘ಭಾನುಪ್ರಕಾಶ್ ಅವರ ಪರಿಚಯಸ್ಥರೊಬ್ಬರಿಗೆ ಕರೆ ಮಾಡಿದ್ದ ಆರೋಪಿ ಚೇತನ್, ‘ನಾನು ತೇಜಸ್ವಿ ಸೂರ್ಯ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಿಮ್ಮ ಕೋವಿಡ್ ರೋಗಿ ಚಿಕಿತ್ಸೆಗೆ ರೆಮ್‌ಡಿಸಿವಿರ್ ಚುಚ್ಚುಮದ್ದು ಅಗತ್ಯವಿದೆ. ₹ 10,000 ಕೊಟ್ಟರೆ ಚುಚ್ಚುಮದ್ದು ವ್ಯವಸ್ಥೆ ಮಾಡುತ್ತೇನೆ’ ಎಂದಿದ್ದ.
‘ವಿಷಯ ತಿಳಿದ ಭಾನುಪ್ರಕಾಶ್ ಸಹ ಆರೋಪಿಗೆ ಕರೆ ಮಾಡಿ ಮಾತನಾಡಿದ್ದರು. ಅವರ ಬಳಿಯೂ ಆರೋಪಿ, ಸಂಸದರ ಕಚೇರಿ ಸಿಬ್ಬಂದಿ ಎಂದೇ ಮಾತನಾಡಿದ್ದ. ಹೆಸರು ಕೇಳಿದಾಗ, ಶಿವಲಿಂಗಯ್ಯ ಎಂದಿದ್ದ’ ಎಂದೂ ಪೊಲೀಸರು ತಿಳಿಸಿದರು. ‘ಸಂಸದ ತೇಜಸ್ವಿ ಸೂರ್ಯ ಹೆಸರು ಹಾಳು ಮಾಡುವುದು ಹಾಗೂ ಅವರ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸಿ ಹಣ ಸಂಪಾದಿಸುವುದು ಆರೋಪಿ ಉದ್ದೇಶವಾಗಿತ್ತು ಎಂದು ಭಾನುಪ್ರಕಾಶ್ ದೂರಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದ್ದು, ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕಿದೆ’ ಎಂದೂ ಹೇಳಿದರು.

Desk

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

44 mins ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

1 hour ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

1 hour ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

2 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

2 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

2 hours ago