ನವದೆಹಲಿ: ಗಾಲ್ವನ್ ಕಣಿವೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿವಾರಣೆಗೆ ಭಾರತ ಮತ್ತು ಚೀನಾದ ಮೇಜರ್ ಜನರಲ್ ಹುದ್ದೆಯ ಅಧಿಕಾರಿಗಳು ಸತತ ಮೂರನೇ ದಿನವೂ ಮಾತುಕತೆಯಲ್ಲಿ ತೊಡಗಿದ್ದಾರೆ.
ಸೋಮವಾರ ಸಂಜೆ ವೇಳೆ ನಡೆದ ಘರ್ಷಣೆಯಲ್ಲಿ 20 ಮಂದಿ ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಇಷ್ಟೇ ಮಂದಿ ಚೀನಾ ಸೈನಿಕರು ಕೂಡ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮಂಗಳವಾರ ಆರಂಭವಾದ ಮಾತುಕತೆಯು ಇಂದು ಕೂಡ ಮುಂದುವರಿದಿದೆ. ಗಡಿಯಲ್ಲಿ ನುಗ್ಗಿ ಬಂದಿದ್ದ ಚೀನಾ ಸೇನೆಯು ಹಿಂದಕ್ಕೆ ಹೋಗಲು ಜೂನ್ 6ರಂದು ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದನ್ನು ಜಾರಿ ಮಾಡಲು ಬುಧವಾರ ಕೂಡ ಸಭೆಯಲ್ಲಿ ಚರ್ಚೆ ನಡೆದಿದೆ.