ಸುಡಾನ್ನ ಹಂಗಾಮಿ ಪ್ರಧಾನಿ ಹಾಗೂ ಹಲವಾರು ಹಿರಿಯ ಸರ್ಕಾರಿ ಅಧಿಕಾರಿಗಳನ್ನು ಸೋಮವಾರ ಬಂಧಿಸಿ ಸೆರೆಮನೆಗೆ ಕಳುಹಿಸಿದೆ ಎಂದು ಮಾಹಿತಿ ಸಚಿವಾಲಯ ಹೇಳಿದೆ. ಕ್ಷಿಪ್ರಕ್ರಾಂತಿಗೆ ಬೆಂಬಲ ಸೂಚಿಸದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಸಚಿವಾಲಯದ ಫೇಸ್ಬುಕ್ ನೀಡಿರುವ ಮಾಹಿತಿಯ ಪ್ರಕಾರ, ದೇಶದಲ್ಲಿ ಇಂಟರ್ನೆಟ್ ಹಾಗೂ ದೂರವಾಣಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಸುಡಾನ್ ಪ್ರಧಾನಿ ಅಬ್ದಲ್ಲಾ ಹಮ್ಡೋಕ್ ಪ್ರಸ್ತುತ ಎಲ್ಲಿದ್ದಾರೆ ಎನ್ನುವುದು ಯಾರಿಗೂ ತಿಳಿದಿಲ್ಲ. ಈ ನಡುವೆ ದೇಶದ ನ್ಯೂಸ್ ಚಾನೆಲ್ ದೇಶಭಕ್ತಿಯ ಸಾಂಪ್ರದಾಯಿಕ ಸಂಗೀತ ಹಾಗೂ ನೈಲ್ ನದಿಯ ಸೀನ್ಗಳನ್ನು ಪ್ರಸಾರ ಮಾಡಿದೆ.
ದೇಶದ ಪ್ರಮುಖ ಪ್ರಜಾಪ್ರಭುತ್ವ ಗುಂಪು ಹಾಗೂ ಅತಿದೊಡ್ಡ ರಾಜಕೀಯ ಪಕ್ಷವು ಸ್ಪಷ್ಟವಾದ ಸೇನಾ ದಂಗೆಯನ್ನು ಎದುರಿಸಲು ಜನರಿಗೆ ಬೀದಿಗಿಳಿಯುವಂತೆ ಕರೆ ನೀಡಿದೆ. ಸಾವಿರಾರು ಜನರು ಖಾರ್ಟೂಮ್ ಹಾಗೂ ಓಮ್ದುರ್ಮಾನ್ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಜನರನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಬಳಕೆ ಮಾಡಿದ್ದಾರೆ ಹಾಗೂ ಇದರಿಂದ ಕೋಪಗೊಂಡ ಪ್ರತಿಭಟನಾಕಾರು ಬೀದಿಗಳಲ್ಲಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ಎಲ್ಲಾ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…
ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…
ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…
ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಶಕ್ತಿ ಅನಾಥಾಶ್ರಮಕ್ಕೆ ಸೇರಿಸಿರುವ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ.
ಗ್ರಾಹಕರ ಸೋಗಿನಲ್ಲಿ ಬಂದು ಬಂಗಾರದ ಖಡ್ಗ ಕದ್ದು ಪರಾರಿಯಾದ ಘಟನೆ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್ನಲ್ಲಿರುವ ತನಿಷ್ಕ ಜ್ಯುವೆಲ್ಲರಿ ಶಾಪ್ನಲ್ಲಿ…
ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.