News Karnataka Kannada
Monday, May 06 2024
ವಿದೇಶ

ಸ್ಪಾಟ್ ಫಿಕ್ಸಿಂಗ್ ಹಗರಣ: ಶ್ರೀಶಾಂತ್‌ ಶಿಕ್ಷೆ ಅವಧಿ ಮುಕ್ತಾಯ

Photo Credit :

ಸ್ಪಾಟ್ ಫಿಕ್ಸಿಂಗ್ ಹಗರಣ: ಶ್ರೀಶಾಂತ್‌ ಶಿಕ್ಷೆ ಅವಧಿ ಮುಕ್ತಾಯ

ನವದೆಹಲಿ: ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಸಿಲುಕಿದ ಭಾರತ ತಂಡದ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್ ಅವರ ಏಳು ವರ್ಷಗಳ ನಿಷೇಧ ಶಿಕ್ಷೆ ಅವಧಿ ಭಾನುವಾರ ಕೊನೆಗೊಂಡಿದೆ.

ನಿಷೇಧ ಅವಧಿ ಮುಕ್ತಾಯಗೊಂಡ ನಂತರ ದೇಶಿಯ ಮಟ್ಟದಲ್ಲಿ ಮತ್ತೆ ವೃತ್ತಿ ಜೀವನ ಆರಂಭಿಸುವುದಾಗಿ 37 ವರ್ಷದ ಶ್ರೀಶಾಂತ್ ಈಗಾಗಲೇ ಸ್ಪಷ್ಪಪಡಿಸಿದ್ದಾರೆ. ಫಿಟ್ನೇಸ್ ಸಾಬೀತುಪಡಿಸಿದರೆ ಶ್ರೀಶಾಂತ್ ಅವರನ್ನು ಪರಿಗಣಿಸುವುದಾಗಿ ಅವರ ತವರು ರಾಜ್ಯ ಕೇರಳ ಭರವಸೆ ವ್ಯಕ್ತಪಡಿಸಿದೆ.

ಎಲ್ಲಾ ಆರೋಪಗಳಿಂದ ಇದೀಗ ಮುಕ್ತವಾಗುತ್ತಿದ್ದು,  ಹೆಚ್ಚಾಗಿ ಪ್ರೀತಿಸುವ ಕ್ರೀಡೆಯನ್ನು ಪ್ರತಿನಿಧಿಸುತ್ತೇನೆ ಎಂದು ಶುಕ್ರವಾರವೇ ಶ್ರೀಶಾಂತ್ ಟ್ವೀಟ್ ಮಾಡಿದ್ದರು. ನಾನು ಆಡುವ ಯಾವುದೇ ತಂಡಕ್ಕೆ ನಾನು ಅತ್ಯುತ್ತಮವಾದದನ್ನು ನೀಡುತ್ತೇನೆ ಎಂದು ಶ್ರೀಶಾಂತ್ ಹೇಳಿದ್ದಾರೆ.

ಆದಾಗ್ಯೂ, ಕೋವಿಡ್-19 ಕಾರಣ ಪ್ರಸ್ತುತ ದೇಶಿಯ ಟೂರ್ನಿಗಳು ಮುಂದೂಡಲ್ಪಟ್ಟಿವೆ. ಒಂದು ವೇಳೆ  ಕೇರಳ ಸರ್ಕಾರ ಅವಕಾಶ ನೀಡಿದರೆ,  ಶ್ರೀಶಾಂತ್ ಮತ್ತೆ ಕಮ್ ಬ್ಯಾಂಕ್ ಆಗಲಿದ್ದಾರೆ. ಆಗಸ್ಟ್ ತಿಂಗಳಲ್ಲಿ ದೇಶಿಯ ಋತುವಿನ ಟೂರ್ನಿಗಳು ಆರಂಭವಾಗಬೇಕಿತ್ತು. ಆದರೆ, ಕೋವಿಡ್-19 ಕಾರಣ ಮುಂದೂಡಲ್ಪಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು