ನವದೆಹಲಿ: ಹತ್ರಾಸ್ ಜಿಲ್ಲೆಯಲ್ಲಿ ನಡೆದ 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಮಂಗಳವಾರ ಕರೆ ನೀಡಿದೆ.
ಆಘಾತಕಾರಿ ಘಟನೆಯ ಬಗ್ಗೆ ಸಿಬಿಐ ತನಿಖೆಗಾಗಿ ಯುಪಿ ಸರ್ಕಾರ ನಿರ್ದೇಶನವನ್ನು ಕೋರಿದೆ ಎಂದು ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿದ ಅಫಿದಾವಿತ್ ನಲ್ಲಿ ತಿಳಿಸಲಾಗಿದೆ.
ಹತ್ರಾಸ್ ಪ್ರಕರಣದ ಸಿಬಿಐ ತನಿಖೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡಬೇಕು, ಉತ್ತರ ಪ್ರದೇಶ ಸರ್ಕಾರವನ್ನು ಕೆಣಕಲು ಸಾಮಾಜಿಕ ಮಾಧ್ಯಮ, ಟಿವಿ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಕೆಟ್ಟ ಅಭಿಯಾನ ಮಾಡಲಾಗಿದೆ ಎಂದು ಅಫಿದಾವಿತ್ ನಲ್ಲಿ ತಿಳಿಸಲಾಗಿದೆ.
ಈ ವಿಷಯ ರಾಷ್ಟ್ರೀಯ ಗಮನ ಸೆಳೆದಿರುವ ಕಾರಣ, ಇದನ್ನು ಕೇಂದ್ರ ಸಂಸ್ಥೆ ತನಿಖೆ ಮಾಡಬೇಕು ಎಂದು ಉತ್ತರ ಪ್ರದೇಶದ ಗೃಹ ಇಲಾಖೆಯ ವಿಶೇಷ ಕಾರ್ಯದರ್ಶಿ ರಾಜೇಂದ್ರ ಪ್ರತಾಪ್ ಸಿಂಗ್ ಸಲ್ಲಿಸಿದ ಅಫಿದಾವಿತ್ನಲ್ಲಿ ತಿಳಿಸಲಾಗಿದೆ.
ನ್ಯಾಯಯುತ ತನಿಖೆಯನ್ನು ಹಳಿ ತಪ್ಪಿಸುವ ಉದ್ದೇಶವನ್ನು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿವೆ ಎಂದು ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪೊಲೀಸರು ಈವರೆಗೆ ನಡೆಸಿದ ತನಿಖೆಯಲ್ಲಿ ವಿವರವಾಗಿ ತಿಳಿಸಲಾಗಿದೆ.