ನೋಯ್ಡಾ: ಹಿರಿಯ ಪತ್ರಕರ್ತ ಶೇಶ್ ನಾರಾಯಣ್ ಸಿಂಗ್ ಅವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
70 ವರ್ಷದ ಪತ್ರಕರ್ತನಲ್ಲಿ ಕೊರೋನಾ ಕಂಡುಬಂದ ಹಿನ್ನೆಲೆ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಜಿಮ್ಸ್) ದಾಖಲಿಸಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಅವರು ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ ಸಿಂಗ್ ಅವರನ್ನು ಸದಾ ಸ್ಮರಿಸಬೇಕಿದೆ ಎಂದು ಟ್ವೀಟ್ ಮಾಡಿದ್ದು ಮೃತರಿಗೆ ಗೌರವ ಸಲ್ಲಿಸಿದ್ದಾರೆ. ಅವರ ನಿಧನ ಅತ್ಯಂತ ನೋವಿನಿಂದ ಕೂಡಿದೆ ಎಂದು ಪ್ರಧಾನಿ ನುಡಿದರು.
ವೃತ್ತಿಪರ ಪತ್ರಕರ್ತ ಮತ್ತು ಟಿವಿ ಚರ್ಚಾ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿದ್ದ ನ್ಯೂಸ್ ಆಂಕರ್ ಆಗಿದ್ದು ಎನ್ಡಿಟಿವಿಯಲ್ಲಿ ಸುದ್ದಿ ಸಂಪಾದಕರಾಗಿದ್ದರು.