Categories: ವಿದೇಶ

ಹೆಚ್ಚುತ್ತಿರುವ ಖಾದ್ಯ ತೈಲ ಬೆಲೆ: ಮಾಹಿತಿ ನೀಡಿದ ಆಹಾರ ಸಚಿವಾಲಯ

ಇಂಡೋನೇಷ್ಯಾವು ಪಾಮ್‌ ಆಯಿಲ್‌ ಪೂರೈಕೆಯನ್ನು ನಿಷೇಧಿಸಿರುವ ಬೆನ್ನಲ್ಲೇ ಭಾರತದಲ್ಲಿ ಖಾದ್ಯ ತೈಲದ ದಾಸ್ತಾನು ಸಾಕಷ್ಟಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಈ ಕುರಿತು ಆಹಾರ ಮತ್ತು ನಾಗರೀಕ ಸರಬರಾಜು ಸಚಿವಾಲಯವು ಮಾಹಿತಿ ನೀಡಿದ್ದು ಬಾರತದಲ್ಲಿ ಖಾದ್ಯ ತೈಲ ದಾಸ್ತಾನು ಸಾಕಷ್ಟಿದೆ. ಈಗಾಗಲೇ 21 ಲಕ್ಷ ಮೆಟ್ರಿಕ್‌ ಟನ್‌ ನಷ್ಟು ದಾಸ್ತಾನು ಇದ್ದು ಇನ್ನೂ 12 ಲಕ್ಷ ಮೆಟ್ರಿಕ್‌ ಟನ್‌ ಸಾಗಣೆಯ ಹಂತದಲ್ಲಿದ್ದು ಮೇ ಕೊನೆಯಲ್ಲಿ ಬಂದು ತಲುಪಲಿದೆ ಎಂದು ಹೇಳಿದೆ.

ಅಲ್ಲದೇ ಎಣ್ಣೆಬೀಜಗಳ ಉತ್ಪಾದನೆಯೂ ಅಧಿಕವಾಗಿದ್ದು ಸೊಯಾಬೀನ್‌ ಉತ್ಪಾದನೆಯು ಧನಾತ್ಮಕವಾಗಿದೆ. ಫೆಬ್ರವರಿಯ ಸಮೀಕ್ಷೆಗಳ ಪ್ರಕಾರ 2021-22 ರಲ್ಲಿ 126.10ಲಕ್ಷ ಮೆಟ್ರಿಕ್‌ ಟನ್‌ ಉತ್ಪಾದನೆಯಾಗುವ ನಿರೀಕ್ಷೆಯಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಉತ್ಪಾದನೆಯ ಪ್ರಮಾಣ ಹೆಚ್ಚಿದ್ದು ಕಳೆದ ವರ್ಷ 112 ಲಕ್ಷ ಮೆಟ್ರಿಕ್‌ ಟನ್‌ ಉತ್ಪಾದನೆಯಾಗಿತ್ತು. ಇದರೊಂದಿಗೆ ಸಾಸಿವೆ ಉತ್ಪಾದನೆಯೂ ಕೂಡ ಜಾಸ್ತಿಯಾಗುವ ನಿರೀಕ್ಷೆಯಿದ್ದು ಸಾಸಿವೆ ಬಿತ್ತನೆ ಪ್ರಮಾಣವು 37% ದಷ್ಟು ಹೆಚ್ಚಾಗಿದ್ದು 114 ಲಕ್ಷ ಮೆಟ್ರಿಕ್‌ ಟನ್‌ ಉತ್ಪಾದನೆಯ ನಿರೀಕ್ಷೆಯಿದೆ.

ಗ್ರಾಹಕರ ಹಿತ ದೃಷ್ಟಿಯಿಂದ ಪ್ರಮುಖ ತೈಲ ಉತ್ಪಾದಕ ಸಂಘಗಳೊಂದಿಗೆ ವಿವಿಧ ಹಂತದ ಮಾತುಕತೆ ನಡೆಸಲಾಗುತ್ತಿದ್ದು ಗ್ರಾಹರಿಗೆ ಹೊರೆಯಾಗದಂತೆ ಕಾಳಜಿ ವಹಿಸಲಾಗುತ್ತಿದೆ ಎಂದು ವರದಿಗಳು ಹೇಳಿವೆ.

Sneha Gowda

Recent Posts

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

21 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

41 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

1 hour ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

2 hours ago