ಇಂಡೋನೇಷ್ಯಾವು ಪಾಮ್ ಆಯಿಲ್ ಪೂರೈಕೆಯನ್ನು ನಿಷೇಧಿಸಿರುವ ಬೆನ್ನಲ್ಲೇ ಭಾರತದಲ್ಲಿ ಖಾದ್ಯ ತೈಲದ ದಾಸ್ತಾನು ಸಾಕಷ್ಟಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಈ ಕುರಿತು ಆಹಾರ ಮತ್ತು ನಾಗರೀಕ ಸರಬರಾಜು ಸಚಿವಾಲಯವು ಮಾಹಿತಿ ನೀಡಿದ್ದು ಬಾರತದಲ್ಲಿ ಖಾದ್ಯ ತೈಲ ದಾಸ್ತಾನು ಸಾಕಷ್ಟಿದೆ. ಈಗಾಗಲೇ 21 ಲಕ್ಷ ಮೆಟ್ರಿಕ್ ಟನ್ ನಷ್ಟು ದಾಸ್ತಾನು ಇದ್ದು ಇನ್ನೂ 12 ಲಕ್ಷ ಮೆಟ್ರಿಕ್ ಟನ್ ಸಾಗಣೆಯ ಹಂತದಲ್ಲಿದ್ದು ಮೇ ಕೊನೆಯಲ್ಲಿ ಬಂದು ತಲುಪಲಿದೆ ಎಂದು ಹೇಳಿದೆ.
ಅಲ್ಲದೇ ಎಣ್ಣೆಬೀಜಗಳ ಉತ್ಪಾದನೆಯೂ ಅಧಿಕವಾಗಿದ್ದು ಸೊಯಾಬೀನ್ ಉತ್ಪಾದನೆಯು ಧನಾತ್ಮಕವಾಗಿದೆ. ಫೆಬ್ರವರಿಯ ಸಮೀಕ್ಷೆಗಳ ಪ್ರಕಾರ 2021-22 ರಲ್ಲಿ 126.10ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗುವ ನಿರೀಕ್ಷೆಯಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಉತ್ಪಾದನೆಯ ಪ್ರಮಾಣ ಹೆಚ್ಚಿದ್ದು ಕಳೆದ ವರ್ಷ 112 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗಿತ್ತು. ಇದರೊಂದಿಗೆ ಸಾಸಿವೆ ಉತ್ಪಾದನೆಯೂ ಕೂಡ ಜಾಸ್ತಿಯಾಗುವ ನಿರೀಕ್ಷೆಯಿದ್ದು ಸಾಸಿವೆ ಬಿತ್ತನೆ ಪ್ರಮಾಣವು 37% ದಷ್ಟು ಹೆಚ್ಚಾಗಿದ್ದು 114 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯ ನಿರೀಕ್ಷೆಯಿದೆ.
ಗ್ರಾಹಕರ ಹಿತ ದೃಷ್ಟಿಯಿಂದ ಪ್ರಮುಖ ತೈಲ ಉತ್ಪಾದಕ ಸಂಘಗಳೊಂದಿಗೆ ವಿವಿಧ ಹಂತದ ಮಾತುಕತೆ ನಡೆಸಲಾಗುತ್ತಿದ್ದು ಗ್ರಾಹರಿಗೆ ಹೊರೆಯಾಗದಂತೆ ಕಾಳಜಿ ವಹಿಸಲಾಗುತ್ತಿದೆ ಎಂದು ವರದಿಗಳು ಹೇಳಿವೆ.
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…
ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…