ಶಮ್ಲಿ(ಉತ್ತರ ಪ್ರದೇಶ): ಪತ್ನಿಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬ ತ್ರಿವಳಿ ತಲಾಖ್ ನೀಡಿರುವ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಹೆಣ್ಣು ಮಗು ಹುಟ್ಟಿರುವುದಕ್ಕಾಗಿ ತವರು ಮನೆಯಿಂದ ಬೈಕ್ ಮತ್ತು ಹಣ ತರುವಂತೆ ಪತಿ ಹಾಗೂ ಆತನ ಮನೆಯವರು ಪೀಡಿಸಿದ್ದಾರೆ ಎಂದು ಪತ್ನಿಯು ಪೊಲೀಸರಿಗೆ ದೂರು ನೀಡಿದ್ದಾಳೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.