Categories: ವಿದೇಶ

ಹೆರಾತ್ ನಲ್ಲಿ ಬಾಲಕ- ಬಾಲಕಿಯರ ಸಹ ಶಿಕ್ಷಣಕ್ಕೆ ನಿಷೇಧ ಹೇರಿದ ತಾಲಿಬಾನ್‌

ಕಾಬೂಲ್ ;ತಾಲಿಬಾನ್ ಅಧಿಕಾರಿಗಳು ಅಫ್ಘಾನಿಸ್ತಾನದಲ್ಲಿ ತಮ್ಮ ಮೊದಲ ‘ಫತ್ವಾ’ ಹೊರಡಿಸಿದ್ದಾರೆ.ಹೆರಾತ್ ಪ್ರಾಂತ್ಯದ ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾನಿಲಯಗಳಲ್ಲಿ ಸಹ-ಶಿಕ್ಷಣವನ್ನು ಅಂದರೆ ಹುಡುಗ- ಹುಡುಗಿ ಒಟ್ಟಿಗೆ ಒಂದೇ ಕಡೆ ಓದುವುದನ್ನು ನಿಷೇಧಿಸಲಾಗಿದೆ.
’ಕೋ- ಎಜುಕೇಷನ್​ ಸಮಾಜದಲ್ಲಿನ ಎಲ್ಲಾ ಅನಿಷ್ಟಗಳ ಮೂಲ ಎಂದು ಹೇಳಿರುವ ತಾಲಿಬಾನ್​ ಅಧಿಕಾರಿಗಳು, ದೇಶವು ದೊಡ್ಡ ಹಿಂಜರಿಕೆಗೆ ಒಳಗಾಗುವ ಭಯವನ್ನು ಇದು ಹೆಚ್ಚು ಮಾಡುತ್ತದೆ. ಅಲ್ಲದೇ ಅಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡ ನಂತರ ತಾಲಿಬಾನ್​ ನಾಯಕರುಗಳು ಕೊಟ್ಟಿದ್ದ ಭರವಸೆಗಳ ಹೊರತಾಗಿಯೂ ಈ ಫತ್ವಾ ಹೊರಬಿದ್ದಿದೆ. ಈ ಅಂಶವನ್ನು ಗಮನಿಸಿದರೆ ಮುಂಬರುವ ದಿನಗಳಲ್ಲಿ ಇನ್ನಷ್ಟು ಕಠಿಣ ಕ್ರಮಗಳು ಜಾರಿಯಾಗುವ ಸುಳಿವು ನೀಡಿದ್ದಾರೆ ತಾಲಿಬಾನ್ ಗಳು.
ಅಫ್ಘಾನಿಸ್ತಾನದಲ್ಲಿ ಮಹಿಳಾ ಹಕ್ಕುಗಳನ್ನು ಗೌರವಿಸುವುದಾಗಿ ಭಯೋತ್ಪಾದಕ ಗುಂಪು ಪ್ರತಿಜ್ಞೆ ಮಾಡಿದ ಮೇಲೂ ಕೂಡ ಈ ಘೋಷಣೆ ಬಂದಿರುವುದು ನೋಡಿದರೆ, ಇನ್ನೂ ಮುಂದೆ ಸಾಕಷ್ಟು ಇದೇ ರೀತಿಯ ಫತ್ವಾಗಳು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು, ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಲೀಕರು ಮತ್ತು ತಾಲಿಬಾನ್ ಅಧಿಕಾರಿಗಳ ನಡುವೆ ನಡೆದ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಖಾಮಾ ಪ್ರೆಸ್ ನ್ಯೂಸ್ ವರದಿ ಮಾಡಿದೆ.

Indresh KC

Recent Posts

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

3 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

5 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

19 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

35 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

47 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

51 mins ago