ಚೆನ್ನೈ: ಕತಾರ್ ಕೋರ್ಟ್ ಎಂಟು ಮಂದಿ ಭಾರತೀಯರಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಿರುವುದು ದೇಶವಾಸಿಗಳಿಗೆ ಆಘಾತ ತಂದಿತ್ತು. ಇದೀಗ ತಮಿಳುನಾಡಿಗೆ ಸೇರಿದ ಸುಮಾರು 12 ಮೀನುಗಾರರನ್ನು ಮಾಲ್ಡೀವ್ಸ್ ಕೋಸ್ಟ್ ಗಾರ್ಡ್ ಬಂಧಿಸಿದ್ದು, ಅವರ ಮತ್ತು ಅವರ ದೋಣಿ ಬಿಡುಗಡೆಗೆ ಕ್ರಮಕೈಗೊಳ್ಳಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶನಿವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ಅಕ್ಟೋಬರ್ 1 ರಂದು ತೂತುಕುಡಿ ಜಿಲ್ಲೆಯಿಂದ ಯಾಂತ್ರೀಕೃತ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರನ್ನು ಮಾಲ್ಡೀವ್ಸ್ ಕೋಸ್ಟ್ ಗಾರ್ಡ್ ಅಕ್ಟೋಬರ್ 23 ರಂದು ತಿನಾಧೂ ದ್ವೀಪದ ಬಳಿ ಬಂಧಿಸಿದೆ ಎಂದು ತಿಳಿಸಿದ್ದಾರೆ.
ಮಾಲ್ಡೀವ್ಸ್ ಕೋಸ್ಟ್ ಗಾರ್ಡ್ ನಿಂದ ತಮಿಳುನಾಡಿನ 12 ಮೀನುಗಾರರ ಸೆರೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.