ಬ್ಯಾಂಕಾಕ್: ಥಾಯ್ಲೆಂಡ್ನ ಪಶ್ಚಿಮ ಪ್ರಾಂತ್ಯದ ಪ್ರಚುವಾಪ್ ಖಿರಿ ಖಾನ್ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು 14 ಮಂದಿ ಮೃತಪಟ್ಟು, ಇಪ್ಪತ್ತು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಬಗ್ಗೆ ಅಲ್ಲಿನ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಬಸ್ ಚಾಲಕನ ಹತೋಟಿ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಗುದ್ದಿದೆ ಪರಿಣಾಮ ಬಸ್ಸಿನ ಅರ್ಧ ಭಾಗ ನುಜ್ಜುಗುಜ್ಜಾಗಿದೆ. ಈ ವೇಳೆ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದ ಕೂಡಲೇ ಅಲ್ಲಿನ ಸ್ಥಳೀಯರು ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಬಂದ ತಂಡ ಬಸ್ಸಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹರಸಾಹಸ ಪಟ್ಟು ಹೊರತೆಗೆಯುವ ಕಾರ್ಯ ಮಾಡಿದ್ದಾರೆ.