Categories: ವಿದೇಶ

16 ತಿಂಗಳ ಮಗುವಿನ ಮೂಗಿನ ಮೂಲಕ ಮೆದುಳಿನ ಗಡ್ಡೆ ಹೊರತೆಗೆದ ವೈದ್ಯರ ತಂಡ

ಚಂಡೀಗಢ : 16 ತಿಂಗಳ ಮಗುವಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೂಗಿನ ಮೂಲಕ ಮೆದುಳಿನ ಗಡ್ಡೆಯನ್ನು ತೆಗೆದು ಮಗುವಿನ ಪ್ರಾಣ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಚಂಡೀಗಢದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾಘಟಕದಲ್ಲಿ ಈ ಘಟನೆ ನೆಡೆದದ್ದು, ಮೆದುಳಿನ ಗಡ್ಡೆಯ ( ಟ್ರೈನ್ ಟ್ಯೂಮರ್ ) ಸಮಸ್ಯೆಯಿಂದ ಬಳಲುತ್ತಿದ್ದ 16 ತಿಂಗಳ ಮಗುವಿನ ಮೂಗಿನಿಂದ ಆ ಗಡ್ಡೆಯನ್ನು ಹೊರತೆಗೆದು ಮಗುವಿನ ಪ್ರಾಣ ರಕ್ಷಿಸುವಲ್ಲಿ ಅಲ್ಲಿನ ವೈದ್ಯರು ಸಫಲರಾಗಿದ್ದಾರೆ.
ಪ್ರಸ್ತುತ ಪರಿಸ್ಥಿತಿಯಲ್ಲಿ ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ . ಇಂತಹ ಎಂಡೋಸ್ಕೋಪಿಕ್ ಶಸ್ತ್ರಚಿಕಿತ್ಸೆಯನ್ನು ಇದೇ ಮೊದಲ ಬಾರಿಗೆ ಪುಟ್ಟ ಕಂದಮ್ಮನ ಮೇಲೆ ಮಾಡಲಾಗಿದೆ ಎನ್ನುತ್ತಾರೆ ವೈದ್ಯರ ತಂಡ.

ದೃಷ್ಟಿ ದೋಷವಿದೆ ಎಂದು ದೂರಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಎಂ ಆರ್ ಐ ಸ್ಕ್ಯಾನಿಂಗ್ ನಡೆಸಿದ್ದಾರೆ . ಆ ಸಂದರ್ಭದಲ್ಲಿ ಮೆದುಳಿನಲ್ಲಿ ಸೆ.ಮೀ ಗಾತ್ರದ ಗಡ್ಡೆಯಿರುವುದು ಕಂಡುಬಂದಿತ್ತು. ನಂತರ ಸತತ 6 ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸಿ ಆ ಗೆಡ್ಡೆಯನ್ನು ಹೊರತೆಗೆಯಲಾಯಿತು ಎನ್ನಲಾಗಿದ್ದು, ಈ ಚಿಕಿತ್ಸೆಯನ್ನು ನರಶಸ್ತ್ರಚಿಕಿತ್ಸಾ ವಿಭಾಗದ ವೈದ್ಯರು – ಡಾ.ಧಂಡಪಾಣಿ ಎಸ್‌ಎಸ್ ಮತ್ತು ಡಾ.ಸುಶಾಂತ್ – ಮತ್ತು ಇಎನ್‌ಟಿ ವಿಭಾಗದ ಡಾ.ರಿಜುನೀತಾ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Desk

Recent Posts

ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅರವಿಂದರ್ ಸಿಂಗ್ ಲವ್ಲಿ

ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಅರವಿಂದರ್ ಸಿಂಗ್ ಲವ್ಲಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

24 mins ago

ಕಾರು ಬೈಕಿನ ನಡುವೆ ಅಪಘಾತ; ಸವಾರ ಮೃತ್ಯು

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತಿಬ್ಬರಿಗೆ ಪೆಟ್ಟಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ…

30 mins ago

ಪರಶುರಾಮ ಮೂರ್ತಿಯ ಕಾಮಗಾರಿ ನಡೆಸಲು ಕಾಂಗ್ರೆಸ್ ಅಡ್ಡಿ: ನವೀನ್‌  ನಾಯಕ್

ಪರಶುರಾಮ ಮೂರ್ತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕಾಮಗಾರಿ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಕಾಮಗಾರಿ ಆರಂಭಕ್ಕೆ ಜಿಲ್ಲಾಡಳಿತ ತಡೆಯೊಡ್ಡುವ ಮೂಲಕ ಪರೋಕ್ಷವಾಗಿ…

50 mins ago

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಹುಲಿ ಮೃತದೇಹ ಪತ್ತೆ

ಗಂಡು ಹುಲಿಯೊಂದರ ಮೃತದೇಹ  ಬಂಡೀಪುರ ಹುಲಿ ಸಂರಕ್ಷಿತ  ಪ್ರದೇಶದ  ಮೈಸೂರು ಜಿಲ್ಲೆಯ  ಹೆಡಿಯಾಲ ಉಪ-ವಿಭಾಗದ ಹೆಬ್ಬಳ್ಳ ಗಸ್ತಿನ ಚಾಮಲಾಪುರ ಕಟ್ಟೆಯ ಅರಣ್ಯ ಪ್ರದೇಶದಲ್ಲಿ  ಪತ್ತೆಯಾಗಿದ್ದು, ವಯೋಸಹಜವಾಗಿ…

56 mins ago

15 ವರ್ಷದಿಂದ ಸಂಸದ ರಾಘವೇಂದ್ರ ಗೆದ್ದು ಏನು ಕಡೆದು ಕಟ್ಟೆಹಾಕಿದ್ದಾರೆ: ಪ್ರದೀಪ್ ಈಶ್ವರ್

ಕಳೆದ 15 ವರ್ಷದಿಂದ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸಂಸದ ರಾಘವೇಂದ್ರ ಗೆದ್ದು ಏನು ಕಡೆದು ಕಟ್ಟೆಹಾಕಿದ್ದಾರೆ ಎಂದು ಚಿಕ್ಕಬಳ್ಳಾಪುರದ ಶಾಸಕ…

1 hour ago

ವರುಣನ ಆರ್ಭಟಕ್ಕೆ ಬೆಳೆ ನಷ್ಟ : ಬಿರುಗಾಳಿ ಮಳೆಗೆ ನೆಲಕಚ್ಚಿದ 8 ಎಕರೆ ಬಾಳೆ ಬೆಳೆ

ವರುಣ ಕ್ಷೇತ್ರದಲ್ಲಿ ವರುಣನ ಆರ್ಭಟಕ್ಕೆ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಸುಮಾರು ಎಂಟು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆಗೊನೆ…

1 hour ago