News Karnataka Kannada
Saturday, May 18 2024
ವಿದೇಶ

ಬಸ್ಸೊಂದು ನದಿ ಕಣಿವೆಗೆ ಉರುಳಿ 20 ಪ್ರಯಾಣಿಕರು ಮೃತ್ಯು

ಪ್ರಯಾಣಿಕರ ಬಸ್ಸೊಂದು ಬೆಟ್ಟ ಪ್ರದೇಶದಲ್ಲಿ ಚಲಿಸುವಾಗ ನದಿ ಕಣಿವೆಗೆ ಉರುಳಿ ಕನಿಷ್ಠ 20 ಜನ ಮೃತಪಟ್ಟಿರುವ ಘಟನೆ ವಾಯವ್ಯ ಪಾಕಿಸ್ತಾನದಲ್ಲಿ ಇಂದು ನಡೆದಿದೆ.
Photo Credit : NewsKarnataka

ಪಾಕಿಸ್ತಾನ: ಪ್ರಯಾಣಿಕರ ಬಸ್ಸೊಂದು ಬೆಟ್ಟ ಪ್ರದೇಶದಲ್ಲಿ ಚಲಿಸುವಾಗ ನದಿ ಕಣಿವೆಗೆ ಉರುಳಿ ಕನಿಷ್ಠ 20 ಜನ ಮೃತಪಟ್ಟಿರುವ ಘಟನೆ ವಾಯವ್ಯ ಪಾಕಿಸ್ತಾನದಲ್ಲಿ ಇಂದು ನಡೆದಿದೆ.

ಗಿಲ್ಗಿಟ್ ಬಾಲ್ಟಿಸ್ತಾನ್ ಪ್ರಾಂತ್ಯದ ದಿಯಾಮೇರ್ ಜಿಲ್ಲೆಯ ಕಾರಕೊರಂ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದು 15 ಜನ ಗಾಯಗೊಂಡಿದ್ದಾರೆ.

ನತದೃಷ್ಟ ಬಸ್ ರಾವಲ್ಪಿಂಡಿಯಿಂದ ಹುಂಜಾಗೆ ತೆರಳುತಿತ್ತು. ಕಾರಕೊರಂನ ಚಿಲ್ಲಾಸ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಣಿವೆಗೆ ಉರುಳಿತ್ತು.

ಘಟನೆಗೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಗಿಲ್ಗಿಟ್ ಬಾಲ್ಟಿಸ್ತಾನ್ ಪ್ರಾಂತ್ಯದ ಮುಖ್ಯಮಂತ್ರಿ ಹಾಜಿ ಗುಲ್ಬರ್ ಖಾನ್ ಅವರು ಚಿಲ್ಲಾಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು