ನವದೆಹಲಿ: ಕೇಂದ್ರ ಸರ್ಕಾರ ರೈತರ ಪ್ರತಿಭಟನೆಗೆ ಹಾಗೂ ಆಗ್ರಹಕ್ಕೆ ತೋರುತ್ತಿರುವ ಧೋರಣೆಯನ್ನು ಖಂಡಿಸಿ ರೈತರು ಹಾಗೂ ರೈತಪರ ಸಂಘಟನೆಗಳು ಮಾಡುತ್ತಿರುವ ಪ್ರತಿಭಟನೆ ಇಂದಿಗೆ 25ನೇ ದಿನಕ್ಕೆ ಕಾಲಿಟ್ಟಿದೆ.
ಸರಕಾರ ಎಪಿಎಂಸಿ ಕಾನೂನು ರದ್ದು ಮಾಡುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಹೇಳುತ್ತಿರುವ ರೈತರು, ದೆಹಲಿ ಸಂಪರ್ಕಿಸುವ ಹೆದ್ದಾರಿಯನ್ನು ತಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅದರೊಂದಿಗೆ ಕಾನೂನು ರದ್ದಾಗುವ ವರೆಗೂ ಯಾವುದೇ ಮಾತುಕತೆ ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಸರ್ಕಾರಕ್ಕೆ ರೈತ ಹೋರಾಟಗಾರರು ತಿಳಿಸಿದ್ದಾರೆ.
ದೆಹಲಿಯ ಕೊರೆಯುವ ಚಳಿಯಲ್ಲೂ ಪ್ರತಿಭಟನೆ ಮುಂದುವರಿಸಿರುವ ರೈತರ ಆರೋಗ್ಯವನ್ನು ಕಾಪಾಡಲು ಪಂಜಾಬಿನ ವಿವಿಧ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿಗಳು ಸಿದ್ಧರಾಗಿದ್ದಾರೆ. ಈ ಮೂಲಕ ರೈತ ಪ್ರತಿಭಟನೆಗೆ ವೈದ್ಯರ ಬೆಂಬಲ ಇದೆ ಎಂಬುದನ್ನು ವ್ಯಕ್ತಪಡಿಸುವಲ್ಲಿ ಸಫಲರಾಗಿದ್ದಾರೆ.