ಕೋಲ್ಕತಾ: ಪಶ್ಚಿಮ ಬಂಗಾಳದ ನದಿಯಿಂದ ಹಿಡಿದ 52 ಕೆಜಿ ತೂಕದ ಬೃಹತ್ ಮೀನನ್ನು ಮಾರಾಟ ಮಾಡಿದ ನಂತರ ವೃದ್ಧ ಬಡ ಮಹಿಳೆಯೊಬ್ಬಳು ರಾತ್ರಿ ಬೆಳಗಾಗುದರ ಒಳಗಾಗಿ ಶ್ರೀಮಂತಳಾಗಿದ್ದಾಳೆ.
ವರದಿಗಳ ಪ್ರಕಾರ ಪಶ್ಚಿಮ ಬಂಗಾಳದ ಸಾಗರ್ ದ್ವೀಪದ ಚಕ್ಫುಲ್ಡುಬಿ ಗ್ರಾಮದ ನಿವಾಸಿ ಪುಷ್ಪಾ ಕಾರ್ ನದಿಯಿಂದ ದೈತ್ಯ ಮಿನನ್ನು ಹಿಡಿದಿದ್ದರು. ಈ ಮೀನು ಸ್ಥಳೀಯ ಮಾರುಕಟ್ಟೆಯಲ್ಲಿ ಪ್ರತಿ ಕಿಲೋಗ್ರಾಂಗೆ 6,200ಗೆ ಮಾರಾಟ ಮಾಡುವ ಮೂಲಕ ಒಟ್ಟು 30000 ರೂ.ಗೆ ಮಾರಾಟವಾಗಿದೆ.
ಸಗಟು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಮೂಲಕ ಮೂರು ಲಕ್ಷ ರೂಪಾಯಿ ದೊರೆತ ಆಕೆಗೆ ಜಾಕ್ಪಾಟ್ ಹೊಡೆದಂತೆ ಆಗಿದೆ ಎಂದು ಪುಷ್ಪಾ ಹೇಳಿದ್ದಾರೆ.
ನನ್ನ ಜೀವನದಲ್ಲಿ ಇಂತಹ ದೈತ್ಯ ಮೀನನ್ನು ನಾನು ನೋಡಿಲ್ಲ. ಇದನ್ನು ಬಂಗಾಳಿ ಭಾಷೆಯಲ್ಲಿ ಭೋಲಾ ಮೀನು ಎಂದು ಕರೆಯಲಾಗುತ್ತದೆ ಎಂದು ಬಡ ವೃದ್ಧೆ ಹೇಳಿದರು.
ಸ್ಥಳೀಯರ ಪ್ರಕಾರ ಮೀನಿನ ಗಾತ್ರ ಮತ್ತು ಅದರಿಂದ ಪಡೆದ ಮೊತ್ತ ಎರಡು ದೊಡ್ಡದಾಗಿದೆ. ಮೀನನ್ನು ನದಿಯಿಂದ ಎಳೆದು ಹಳ್ಳಿಗೆ ತರಲು ಮಹಿಳೆ ಸಾಕಷ್ಟು ಪ್ರಯತ್ನ ಪಡಬೇಕಾಯಿತು. ಸ್ಥಳೀಯರ ಸಹಾಯದಿಂದ ಮೀನನ್ನು ಮಾರುಕಟ್ಟೆಗೆ ತರಲು ಸಾಧ್ಯವಾಯಿತು.
ಹಡಗೊಂದಕ್ಕೆ ಡಿಕ್ಕಿ ಹೊಡೆದ ಕಾರಣ ಮೀನು ಸಾವನ್ನಪ್ಪಿರಬಹುದು ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ.
ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…
ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.
ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.
ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.