Categories: ವಿದೇಶ

ಕೀನ್ಯಾದಲ್ಲಿ ಗ್ಯಾಸ್​​​ ತುಂಬಿದ್ದ ಟ್ರಕ್​​ ಸ್ಫೋಟ: ಗಡಗಡ ನಡುಗಿದ ಎಂಬಾಕಸಿ ನಗರ

ನೈರೋಬಿಯ: ಕೀನ್ಯಾದ ರಾಜಧಾನಿ ನೈರೋಬಿಯ ಎಂಬಾಕಸಿ ಎಂಬ ನಗರದಲ್ಲಿರುವ ಜನವಸತಿ ಪ್ರದೇಶದಲ್ಲಿದ್ದ ಗ್ಯಾಸ್​​​ ಫಿಲ್ಲಿಂಗ್​​​​ ಸ್ಟೇಷನ್​​ನಲ್ಲಿ ಗ್ಯಾಸ್​​​ ತುಂಬಿದ್ದ ಟ್ರಕ್​​ವೊಂದು ಸ್ಫೋಟಗೊಂಡಿದೆ.

ಬೆಳಗಿನ ಜಾವದ ಭೀಕರ ಅಗ್ನಿ ಅವಘಡಕ್ಕೆ ಕಟ್ಟಡ ಮತ್ತು ವಾಹನಗಳು ಸುಟ್ಟು ಕರಕಲಾಗಿದ್ದು, ಬ್ಲಾಸ್ಟ್​​​​ನ ಪರಿಣಾಮ ಇಡೀ ಎಂಬಾಕಸಿ ನಗರವೇ ನಡುಗಿದೆ.

ಭೀಕರ ಬ್ಲಾಸ್ಟ್​​​​ನಿಂದಾಗಿ ಸ್ಥಳದಲ್ಲಿದ್ದ ಮೂವರು ಜೀವ ಚೆಲ್ಲಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂಬ ಮಾಹಿತಿ ಲಭ್ಯವಾಗಿದ್ದು, ಸುಮಾರು 300ಕ್ಕೂ ಹೆಚ್ಚು ಮಂದಿ ಭೀಕರವಾಗಿ ಗಾಯಗೊಂಡಿದ್ದಾರೆ.

ಸ್ಫೋಟದಿಂದಾಗಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಕ್ಕಪಕ್ಕದಲ್ಲಿದ್ದ ಇದ್ದ ಸಣ್ಣ ಅಂಗಡಿ, ಮಳಿಗೆಗಳು ಸೇರಿದಂತೆ ಜನರು ವಾಸಿಸುತ್ತಿದ್ದ ಕಟ್ಟಡಗಳಿಗೂ ಬೆಂಕಿ ಆವರಿಸಿಕೊಂಡಿದ್ದು, ಸ್ಫೋಟದ ತೀವ್ರತೆಯಿಂದಾಗಿ ಬೃಹತ್​​​​​ ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.

ಘಟನೆಯ ಸುದ್ದಿ ತಿಳಿದು ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಸುಮಾರು 15ಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಸತತ 3 ಗಂಟೆ ಕಾರ್ಯಚರಣೆ ಬಳಿಕ ಬೆಂಕಿಯನ್ನು ನಂದಿಸಲು ಯಶಸ್ವಿಯಾಗಿದ್ದಾರೆ.

ಗ್ಯಾಸ್​​​ ಫಿಲ್ಲಿಂಗ್​ ಸ್ಟೇಷನ್​​ನ ಬೇಜವಬ್ದಾರಿಯೇ ಈ ಘಟನೆಗೆ ಕಾರಣ ಎನ್ನಲಾಗ್ತಿದೆ.

Ashika S

Recent Posts

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

26 mins ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

43 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

1 hour ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

2 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

2 hours ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

2 hours ago