Categories: ವಿದೇಶ

BREAKING ; ಅಫ್ಘಾನಿಸ್ತಾನದಿಂದ ಸಂತ್ರಸ್ಥರನ್ನು ಸ್ಥಳಾಂತರಿಸುತಿದ್ದ ಉಕ್ರೇನ್ ವಿಮಾನ ಅಪಹರಣ

ಕಾಬೂಲ್, ; ಆಫ್ಘಾನಿಸ್ತಾನದಿಂದ ಸಂತ್ರಸ್ತರನ್ನು ಸ್ಥಳಾಂತರಿಸುತ್ತಿದ್ದ ಉಕ್ರೇನ್‍ನ ವಿಮಾನವನ್ನು ಅಪಹರಣ ಮಾಡಲಾಗಿದೆ ಎಂದು ಉಕ್ರೇನ್‍ನ ವಿದೇಶಾಂಗ ವ್ಯವಹಾರಗಳ ಉಪ ಸಚಿವ ಯೆವ್‍ಗೆನ್ಸಿ ಹೆನಿನ್ ಆರೋಪಿಸಿದ್ದಾರೆ. ಆದರೆ ಆರೋಪವನ್ನು ಇರಾನ್‍ನ ವಿಮಾನ ಯಾನ ಸಂಸ್ಥೆ ಅಲ್ಲಗಳೆದಿದೆ.
ರಷ್ಯನ್ ಸುದ್ದಿ ಸಂಸ್ಥೆಗೆ ಹೇಳಿಕೆ ನೀಡಿರುವ ಉಕ್ರೇನ್‍ನ ಉಪ ಸಚಿವರು ಆಫ್ಘಾನಿಸ್ತಾನದಲ್ಲಿದ್ದ ಉಕ್ರೇನ್‍ನ ಪ್ರಜೆಗಳನ್ನು ಇರಾನ್ ಮೂಲಕ ಸ್ಥಳಾಂತರಿಸಲಾಗುತ್ತಿತ್ತು. ಆ ವಿಮಾನವನ್ನು ಭಾನುವಾರ ಹೈಜಾಕ್ ಮಾಡಲಾಗಿತ್ತು. ಇಂದು ಅಕ್ಷರಶಃ ವಿಮಾನವನ್ನು ನಮ್ಮಿಂದ ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.ಆದರೆ ಯಾವ ಗುಂಪು ಈ ಕೃತ್ಯ ಮಾಡಿದೆ ಎಂಬುದು ಖಚಿತವಾಗಿಲ್ಲ. ಅಪಹರಣಕಾರರನ್ನು ಶಸ್ತ್ರಾಸ್ತ್ರಗಳನ್ನು ಹೊಂದಿದ್ದರು. ವಿಮಾನ ಹೈಜಾಕ್ ಆದ ಬಳಿಕ ಮತ್ತಷ್ಟು ಉಕ್ರೇನ್ ಪ್ರಜೆಗಳನ್ನು ಸ್ಥಳಾಂತರಿಸಲು ನಾವು ನಡೆಸಿದ ಪ್ರಯತ್ನಗಳು ಕೂಡ ಫಲ ನೀಡಿಲ್ಲ. ನಮ್ಮವರನ್ನು ಕಾಬೂಲ್‍ನ ವಿಮಾನ ನಿಲ್ದಾಣದವರೆಗೂ ಬರಲು ತಾಲಿಬಾನಿಗಳು ಬಿಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಅಪಹರಣಕ್ಕೊಳಗಾದ ವಿಮಾನದಲ್ಲಿ 31 ಉಕ್ರೇನ್ ಪ್ರಜೆಗಳು ಸೇರಿದಂತೆ 83 ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ.ಆದರೆ ಈ ಆರೋಪವನ್ನು ಇರಾನ್‍ನ ನಾಗರಿಕ ವಿಮಾನ ಯಾನ ಸಂಸ್ಥೆ ಅಲ್ಲಗಳೆದಿದೆ. ಅಪಹರಣಕ್ಕೊಳಗಾಗಿದೆ ಎಂದು ಹೇಳಲಾದ ವಿಮಾನ ನಿನ್ನೆ ಇರಾನ್‍ನ ಉತ್ತರ ವಲಯದ ಮಶಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು.

Indresh KC

Recent Posts

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

12 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

28 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

53 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

9 hours ago