ಚೆನ್ನೈ: ‘ಸನಾತನ ಧರ್ಮ’ದ ‘ನಿರ್ಮೂಲನೆ’ಯ ಕರೆ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ತಮಿಳುನಾಡು ಸಚಿವ ಮತ್ತು ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ . ಈ ಕುರಿತು ವಿವಾದ ತೀವ್ರಗೊಂಡ ಬಳಿಕ ಭಾನುವಾರ ಸಂಜೆ ಮತ್ತೊಮ್ಮೆ ಉದಯನಿಧಿ ಹೇಳಿಕೆ ನೀಡಿದ್ದು, ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ನಿರಂತರವಾಗಿ ಹೇಳುತ್ತೇನೆ ಎಂದರು.
ದ್ರಾವಿಡ ವಿಚಾರಧಾರೆಯು ಬದಲಾವಣೆಗೆ ಒಗ್ಗಿಕೊಳ್ಳುತ್ತದೆ. ದ್ರಾವಿಡ ಪರಿಕಲ್ಪನೆ ಎಲ್ಲರನ್ನು ಸಮಾನವಾಗಿ ಕಾಣುತ್ತದೆ. ಆದರೆ ಸನಾತನ ಧರ್ಮ ಶಾಶ್ವತ ಪರಿಕಲ್ಪನೆ ಹೊಂದಿದ್ದು ಯಾವುದೇ ಬದಲಾವಣೆಯನ್ನು ಒಪ್ಪುವುದಿಲ್ಲ. ನಾನು ಸನಾತನ ಧರ್ಮದ ನಿರ್ಮೂಲನೆಗೆ ಕರೆಕೊಟ್ಟಿದ್ದೇ ಹೊರತು ಜನರ ನರಮೇಧಕ್ಕಲ್ಲ ಎಂದರು.
ದ್ರಾವಿಡಂ ನಿರ್ಮೂಲನೆಯಾಗಬೇಕು ಎಂದು ಕೆಲವರು ಹೇಳುತ್ತಿದ್ದಾರೆ. ಇದರರ್ಥ ಡಿಎಂಕೆ ಕಾರ್ಯಕರ್ತರನ್ನು ಕೊಲ್ಲಬೇಕೆ ಎಂದು ಉದಯನಿಧಿ ಪ್ರಶ್ನಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ‘ಕಾಂಗ್ರೆಸ್ ಮುಕ್ತ ಭಾರತ’ಕ್ಕೆ ಕರೆ ನೀಡುತ್ತಾರೆ. ಆದರೆ ಇದರರ್ಥ ಎಲ್ಲಾ ಕಾಂಗ್ರೆಸ್ ನಾಯಕರನ್ನು ಕೊಲ್ಲಬೇಕು ಎಂದಲ್ಲ ಎಂದು ವಿವರಿಸಿದರು. ಬಿಜೆಪಿಗೆ ಸತ್ಯಗಳನ್ನು ತಿರುಚಿ ಸುಳ್ಳು ಹೇಳುವುದೇ ಅಭ್ಯಾಸ. ಬಿಜೆಪಿಯು ಭಾರತದ ಮೈತ್ರಿ ಕಂಡು ದಂಗಾಗಿದೆ. ಇದೇ ಕಾರಣಕ್ಕೆ ಜನರ ಮನಸ್ಸನ್ನು ಬೇರೆಡೆ ತಿರುಗಿಸಲು ಸುಳ್ಳು ಕಥೆ ಕಟ್ಟುತ್ತಿದೆ. ಆದರೆ ನಾನು ಇಂತಹ ಗೊಡ್ಡು ಬೆದರಿಕೆಗೆ ಜಗ್ಗುವುದಿಲ್ಲ ಎಂದರು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…