News Karnataka Kannada
Saturday, May 04 2024
ವಿದೇಶ

ನಿಜ್ಜರ್‌ ಹತ್ಯೆ ತನಿಖೆಯಲ್ಲಿ ಸಹಕರಿಸುವಂತೆ ಭಾರತಕ್ಕೆ ಕೆನಡಾ ಸೂಚನೆ

Canada asks India to cooperate in Nijjar murder probe
Photo Credit : IANS

ವಾಷಿಂಗ್ಟನ್: ಭಾರತದಲ್ಲಿ ಕೆನಡಾ ರಾಜತಾಂತ್ರಿಕ ಸಿಬ್ಬಂದಿ ಕಡಿತಕ್ಕೆ ಒತ್ತಾಯಿಸುವ ಭಾರತದ ನಿಲುವು ಸರಿಯಲ್ಲ ಎಂದು ಅಮೆರಿಕ ಹೇಳಿದೆ. ಖಲಿಸ್ತಾನಿ ಪರ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಬಳಿಕ ಕೆನಡಾ ತನ್ನ 41 ರಾಜತಾಂತ್ರಿಕರು ಮತ್ತು 42 ಮಂದಿ ಅವಲಂಬಿತರನ್ನು ಭಾರತದಿಂದ ಸ್ಥಳಾಂತರಿಸಿದೆ.

ಕೆನಡಾದ ರಾಜತಾಂತ್ರಿಕರು ಭಾರತದಿಂದ ನಿರ್ಗಮಿಸಿರುವ ಬಗ್ಗೆ ನಾವು ಕಳವಳಗೊಂಡಿದ್ದೇವೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಶುಕ್ರವಾರ ಹೇಳಿದ್ದಾರೆ. ಅಲ್ಲದೆ ಹತ್ಯೆ ಸಂಬಂಧ ಕೆನಡಾದಲ್ಲಿ ನಡೆಯುತ್ತಿರುವ ತನಿಖೆಯಲ್ಲಿ ಸಹಕರಿಸಲು ನಾವು ಭಾರತ ಸರ್ಕಾರವನ್ನು ಒತ್ತಾಯಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಇನ್ನು ಮುಂದೆ ಭಾರತದಲ್ಲಿ ಕೆನಡಾದ 21 ರಾಜತಾಂತ್ರಿಕರು ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದರು.

ಕೆನಡಾದ ರಾಜತಾಂತ್ರಿಕ ಮಿಷನ್‌ನ ಮಾನ್ಯತೆ ಪಡೆದ ಸದಸ್ಯರು ಅನುಭವಿಸುವ ಸವಲತ್ತುಗಳು ಮತ್ತು ವಿನಾಯಿತಿಗಳಿಗೆ ಸಂಬಂಧಿಸಿದಂತೆ 1961 ರ ರಾಜತಾಂತ್ರಿಕ ಸಂಬಂಧಗಳ ವಿಯೆನ್ನಾ ಒಪ್ಪಂದದ ಅಡಿಯಲ್ಲಿ ಭಾರತವು ತನ್ನ ಬಾಧ್ಯತೆಗಳನ್ನು ಎತ್ತಿಹಿಡಿಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಮಿಲ್ಲರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗಿ ಭಾರತವು ಏಕಪಕ್ಷೀಯವಾಗಿ ರಾಜತಾಂತ್ರಿಕ ಸವಲತ್ತುಗಳು ಮತ್ತು ವಿನಾಯಿತಿಗಳನ್ನು ರದ್ದುಗೊಳಿಸಿದೆ ಎಂದು ಜೋಲಿ ಆರೋಪಿಸಿದ್ದರು. ಮತ್ತು ನವದೆಹಲಿಯ “ಅವಿವೇಕದ” ನಡೆ ರಾಜತಾಂತ್ರಿಕ ಸಂಬಂಧಗಳ ವಿಯೆನ್ನಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿದ್ದರು. ಈ ವಿಚಾರವನ್ನು ಭಾರತ ತಿರಸ್ಕರಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು