News Karnataka Kannada
Thursday, May 02 2024
ವಿದೇಶ

ನಿಜ್ಜರ್‌ ಹತ್ಯೆಯಲ್ಲಿ ಭಾರತ ಸಂಚು: ಭಾರತದ ವಿರುದ್ಧ ಮತ್ತೊಮ್ಮೆ ಕಿಡಿಕಾರಿದ ಕೆನಡಾ

Canada hits out at India over India's conspiracy to kill Nijjar
Photo Credit : News Kannada

ನವದೆಹಲಿ: ಭಾರತದ ವಿರುದ್ಧ ಸದಾ ಕಾಲ ಕೆಂಡಕಾರುತ್ತಿರುವ ಕೆನಡಾದ ಪ್ರಧಾನಿ ಜಸ್ಟಿನ್‌ ಟ್ರುಡೊ ಈಗ ಮತ್ತೊಮ್ಮೆ ಮಾತನಾಡಿದ್ದಾರೆ.

ಕೆನಡಾದ ಪ್ರಜೆಗಳ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟರು ಭಾಗಿಯಾಗಿದ್ದಾರೆ ಎಂಬುದು ವಿಶ್ವಾಸಾರ್ಹ ಮೂಲಗಳಿಂದ ನಮಗೆ ತಿಳಿದಿದೆ. ಈ ವಿಚಾರದ ಕುರಿತು ಆಳದ ತನಿಖೆ ಸಂಬಂಧ ಸಹಕಾರ ನೀಡುವಂತೆ ಕೇಳಿಕೊಂಡಿದ್ದೆವು. ಅಲ್ಲದೆ ಈ ವಿಚಾರದಲ್ಲಿ ಅಮೆರಿಕ ಸೇರಿದಂತೆ ನಮ್ಮ ಸಹವರ್ತಿ ದೇಶಗಳೊಂದಿಗೆ ಮಾತನಾಡಿದ್ದೇವೆ. ಅಂತಾರಾಷ್ಟ್ರೀಯ ಕಾನೂನು ಮತ್ತು ಪ್ರಜಾತಾಂತ್ರಿಕ ಅಂಶಗಳನ್ನು ಉಲ್ಲಂಘನೆ ಕುರಿತು ಮನವರಿಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಕೆನಡಾ ಯಾವಾಗಲೂ ಕಾನೂನಿನ ಪರವಾಗಿ ನಿಲ್ಲುವ ದೇಶವಾಗಿದೆ. ದೊಡ್ಡ ದೇಶಗಳು ಅಂತಾರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದರೆ. ಇಡೀ ಪ್ರಪಂಚವು ಅಪಾಯಕಾರಿಯಾಗಿ ಪರಿಣಮಿಸಲಿದೆ ಎಂದು ಅವರು ಹೇಳಿದ್ದಾರೆ.

ಅದೇ ರೀತಿ ಭಾರತವು ವಿಯೆನ್ನಾ ಒಪ್ಪಂದ ಉಲ್ಲಂಘಿಸಿದ ಮತ್ತು ಕೆನಡಾದ ರಾಜತಾಂತ್ರಿಕರನ್ನು ತೆಗೆದುಹಾಕಿದ ಬೆಳವಣಿಗೆಯಿಂದ ನಾವು ಕಳವಳಗೊಂಡಿದ್ದೇವೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು