News Karnataka Kannada
Friday, May 03 2024
ವಿದೇಶ

ಬಿಆರ್​ಎಸ್​​​ ಡಿಎನ್ಎಯಲ್ಲೇ ಭ್ರಷ್ಟಾಚಾರ ಇದೇ : ಪ್ರಧಾನಿ ನರೇಂದ್ರ ಮೋದಿ

Corruption in BRS DNA: Prime Minister Narendra Modi
Photo Credit : News Kannada
ಹೈದರಾಬಾದ್:  ತೆಲಂಗಾಣದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ  ಹಾಗೂ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ   ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತೆಲಂಗಾಣ ವಿಧಾನಸಭೆ ಪ್ರಚಾರಕ್ಕಾಗಿ ಎಲ್​ಬಿ ಸ್ಟೇಡಿಯಂನಲ್ಲಿ ಬಿಜೆಪಿ ಆಯೋಜಿಸಿದ್ದ ಬಿಸಿ ಸ್ವಾಭಿಮಾನ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸ್ವಜನಪಕ್ಷಪಾತ, ಭ್ರಷ್ಟಾಚಾರ ಮತ್ತು ತುಷ್ಟೀಕರಣ ಎಂಬುದು ಬಿಆರ್​​ಎಸ್ ಮತ್ತು ಕಾಂಗ್ರೆಸ್​​ ಪಕ್ಷಗಳ ಡಿಎನ್​ಎಯಲ್ಲೇ ಅಡಗಿದೆ ಎಂದು ಮೋದಿ ವಾಗ್ದಾಳಿ ನಡೆಸಿದರು.
ಬಿಆರ್​ಎಸ್, ಕಾಂಗ್ರೆಸ್ ರಕ್ಷಣೆಯಲ್ಲಿ ಭ್ರಷ್ಟಾಚಾರ ಅರಳುತ್ತದೆ. ಕಾಂಗ್ರೆಸ್ ಮತ್ತು ಬಿಆರ್‌ಎಸ್ ಎಂದಿಗೂ ಅದನ್ನು ಬಿಡುವುದಿಲ್ಲ. ಹಿಂದುಳಿದ ವರ್ಗದ ವ್ಯಕ್ತಿ ಮುಖ್ಯಮಂತ್ರಿಯಾಗಲಿ ಎಂದು ಪ್ರಧಾನಿ ಮೋದಿ ಹೇಳಿದರು.
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಶ್ಲಾಘಿಸಿದ ಪ್ರಧಾನಿ, ಹಿಂದುಳಿದ ವರ್ಗದ ಜನರ ಹಕ್ಕುಗಳನ್ನು ಪೂರೈಸುವುದು ಎನ್‌ಡಿಎ. ಅವರಿಗೆ ನ್ಯಾಯಯುತ ಪ್ರಾತಿನಿಧ್ಯವನ್ನು ಒದಗಿಸುವುದು ಎನ್‌ಡಿಎ. ನಾವು ಎಪಿಜೆ ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದೇವೆ. 1996ರಲ್ಲಿ ಬುಡಕಟ್ಟು ಜನಾಂಗದ ನಾಯಕ ಪಿ.ಎಸ್.ಸಂಗಮಾಜಿ ಅವರನ್ನು ಲೋಕಸಭಾ ಸ್ಪೀಕರ್ ಹುದ್ದೆಗೆ ಆಯ್ಕೆ ಮಾಡಿದಾಗ ಅಟಲ್‌ಜಿ ಸಂಪೂರ್ಣ ಬೆಂಬಲ ನೀಡಿದರು ಎಂದು ಮೋದಿ ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು