Categories: ವಿದೇಶ

ಆಫ್ಘಾನಿಸ್ತಾನದಲ್ಲಿ ಮರಣದಂಡನೆ; ಕ್ರೀಡಾಂಗಣದಲ್ಲಿ ತಾಲಿಬಾನ್‌ ಶೈಲಿ ಶಿಕ್ಷೆ

ಅಫ್ಘಾನಿಸ್ತಾನ್‌: ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಇಬ್ಬರು ಕೊಲೆಗಾರರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿದ ಘಟನೆ ತಾಲಿಬಾನ್‌ ಆಡಳಿತದಲ್ಲಿ ನಡೆದಿದೆ.

ತಾಲಿಬಾನ್ ನಾಯಕ ಹಿಬತುಲ್ಲಾ ಅಖುಂದ್ಜಾದಾ ಸಹಿ ಮಾಡಿದ ಡೆತ್ ವಾರಂಟ್ ಅನ್ನು ಸುಪ್ರೀಂಕೋರ್ಟ್ ಅಧಿಕಾರಿ ಗಟ್ಟಿಯಾಗಿ ಓದಿದ ನಂತರ ಘಜ್ನಿ ನಗರದಲ್ಲಿ ಇಬ್ಬರು ಅಪರಾಧಿಗಳ ಹಿಂಭಾಗಕ್ಕೆ ಅನೇಕ ಗುಂಡು ಹಾರಿಸಿದ ನಂತರ ಗಲ್ಲಿಗೇರಿಸಲಾಯಿತು ಎಂದು ಎಎಫ್‌ಪಿ ವರದಿ ಮಾಡಿದೆ.

ಎರಡು ವರ್ಗಳ ವಿಚಾರಣೆಯ ನಂತರ ಶಿಕ್ಷೆಯ ಆದೇಶಕ್ಕೆ ಸಹಿ ಹಾಕಲಾಗಿದೆ ಎಂದು ಸುಪ್ರೀಂಕೋರ್ಟ್ ಅಧಿಕಾರಿ ಅತೀಕುಲ್ಲಾ ದರ್ವಿಶ್ ಹೇಳಿದ್ದಾರೆ.

ಮರಣದಂಡನೆಯನ್ನು ವೀಕ್ಷಿಸಲು ಸಾವಿರಾರು ಪುರುಷರು ಜಮಾಯಿಸಿದ್ದು, ಶಿಕ್ಷೆಗೊಳಗಾದವರ ಕುಟುಂಬದವರು ಉಪಸ್ಥಿತರಿದ್ದರು.

ತಾಲಿಬಾನ್‌ ಆಡಳಿತದ ಚುಕ್ಕಾಣಿ ಹಿಡಿಯುವ ಮೊದಲು ದೇಶದಲ್ಲಿ ಹೊಸ ನ್ಯಾಯಾಂಗ ವ್ಯವಸ್ಥೆಯನ್ನು ನಿರ್ಮಿಸಲು ವಿದೇಶಿ ಬೆಂಬಲಿತ ಸರ್ಕಾರಗಳು ಪ್ರಯತ್ನಿಸಿದ್ದವು.

ತಾಲಿಬಾನ್‌ ಆಡಳಿತದಲ್ಲಿ ಮರಣದಂಡನೆ ಸಾಮಾನ್ಯವಾಗಿದ್ದು, ಅಧಿಕಾರಕ್ಕೆ ಬಂದಾಗಿನಿಂದ ನೀಡಲಾದ ಮೂರನೆ ಅಥವ ನಾಲ್ಕನೆ ಮರಣದಂಡನೆ ಇದೆಂದು ಹೇಳಲಾಗಿದೆ.

Maithri S

Recent Posts

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

10 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

20 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

32 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

56 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

57 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

1 hour ago