News Karnataka Kannada
Monday, April 29 2024
ವಿದೇಶ

ದೆಹಲಿ ವಾಯುಮಾಲಿನ್ಯ ದುರಂತ: ಕೃತಕ ಮಳೆ ಸುರಿಸಲು ಪ್ಲ್ಯಾನ್‌

Delhi air pollution disaster: Plan for artificial rain
Photo Credit : News Kannada

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ವಿಚಾರದಲ್ಲಿ ಜಗತ್ತಿನಲ್ಲಿಯೇ ಅತಿ ನಿಕೃಷ್ಟ ಸ್ಥಿತಿಯಲ್ಲಿದೆ. ಈ ನಿಟ್ಟಿನಲ್ಲಿ ವಾಯು ಮಾಲಿನ್ಯ ನಿಯಂತ್ರಿಸಲು ಈ ತಿಂಗಳು ಮೋಡ ಬಿತ್ತನೆ ಮೂಲಕ ಕೃತಕ ಮಳೆ ಸುರಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಪರಿಸರ ಸಚಿವ ಗೋಪಾಲ್ ರೈ ಅವರು ಬುಧವಾರ ಹೇಳಿದ್ದಾರೆ. ಈ ಸಂಬಂಧ ಸಚಿವ ರೈ ಅವರು ಐಐಟಿ ಕಾನ್ಪುರ ವಿಜ್ಞಾನಿಗಳೊಂದಿಗೆ ಸಭೆ ನಡೆಸಿದ್ದು, ವಾತಾವರಣದಲ್ಲಿ ಮೋಡಗಳು ಅಥವಾ ತೇವಾಂಶವಿದ್ದರೆ ಮಾತ್ರ ಮೋಡ ಬಿತ್ತನೆ ಮಾಡಲು ಯತ್ನಿಸಬಹುದು ಎಂದಿದ್ದಾರೆ.

“ನವೆಂಬರ್ 20-21ರ ಸುಮಾರಿಗೆ ಮೋಡ ಬಿತ್ತನೆಗೆ ಸೂಕ್ತ ವಾತಾವರಣ ಸೃಷ್ಟಿಯಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಸಿದ್ಧಪಡಿಸಲು ನಾವು ವಿಜ್ಞಾನಿಗಳಿಗೆ ಕೇಳಿಕೊಂಡಿದ್ದೇವೆ. ಅದನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗುವುದು” ಎಂದು ಸಚಿವರು ತಿಳಿಸಿದ್ದಾರೆ. ಇದೇ ವೇಳೆ, ಸುಪ್ರೀಂ ಕೋರ್ಟ್‌ ಆದೇಶದಂತೆ ದೆಹಲಿಗೆ ಆಪ್ ಆಧಾರಿತ ಟ್ಯಾಕ್ಸಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸಚಿವ ಗೋಪಾಲ್ ರೈ ಅವರು ಹೇಳಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಕಾರುಗಳಿಗೆ ಸಮ-ಬೆಸ ನಿಯಮ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು