News Karnataka Kannada
Monday, May 06 2024
ಮೈಸೂರು

ʻಸುಧರ್ಮಾʼ ಸಂಪಾದಕ ಸಂಪತ್‌ಕುಮಾರ್‌ ನೆನೆದು ಸಂಸ್ಕೃತದಲ್ಲೇ ಶೋಕ ಸಂದೇಶ ಕಳಿಸಿದ ಪ್ರಧಾನಿ

Sudharma Mysore 3 7 21
Photo Credit :

ಹೊಸದಿಲ್ಲಿ: ಸುಧರ್ಮಾ ಪತ್ರಿಕೆಯ ಸಂಪಾದಕ ಸಂಪತ್ ಕುಮಾರ್ ಅವರ ನಿಧನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸ್ಕೃತದಲ್ಲೇ ಶೋಕ ಸಂದೇಶ ಕಳಿಸಿದ್ದಾರೆ.
ಶ್ರೀಮತಿ ಜಯಲಕ್ಷ್ಮಿ ಮಹೋದಯೇ ಎಂದು ತಮ್ಮ ಪತ್ರ ಆರಂಭಿಸಿರುವ ಪ್ರಧಾನಿ ಅವರು, ʻಏತಸ್ಮಿನ್ ಕಠಿನಸಮಯೇ ಮಮ ಸಂವೇದನಾಃ ಕುಟುಂಬೇನ ಸಹ ಸಂತಿ (ಈ ಕಠಿಣ ಸಮಯದಲ್ಲಿ ಕುಟುಂಬದವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ) ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಸರಳ ಸ್ನೇಹಶೀಲ ವ್ಯಕ್ತಿತ್ವದ ಸಂಪತ್‌ಕುಮಾರ್ ಸಂಸ್ಕೃತ ಭಾಷೆಯ ಪ್ರಚಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ಸಂಸ್ಕೃತವು ಎಲ್ಲರಿಗೂ ತಲುಪುವಂತಾಗಬೇಕೆಂಬ ಉದ್ದೇಶದಿಂದ ಅವರು ಪಟ್ಟ ಪರಿಶ್ರಮ ಎಲ್ಲರಿಗೂ ಪ್ರೇರಣಾದಾಯಕವಾಗಬೇಕು ಎಂದು ಮೋದಿ ಹೇಳಿದ್ದಾರೆ.
ಕೆ.ವಿ.ಸಂಪತ್‌ಕುಮಾರ್ ಅವರ ನಿಧನದ ವಿಷಯ ತಿಳಿದು ನೋವಾಯಿತು. ಸರಳ, ಸ್ನೇಹಶೀಲ ವ್ಯಕ್ತಿತ್ವದ ಶ್ರೀಮಂತ ಹೃದಯ ಅವರದು ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು